ಬ್ರೇಕಿಂಗ್ ನ್ಯೂಸ್
06-08-24 01:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಬಿಜೈ ನಿವಾಸಿ 18 ವರ್ಷದ ಹುಡುಗಿಯೊಬ್ಬಳು ದಿಢೀರ್ ಮನೆಯಿಂದ ಕಾಣೆಯಾಗಿದ್ದ ಬಗ್ಗೆ ಬರ್ಕೆ ಠಾಣೆಯಲ್ಲಿ ಜುಲೈ 30ರಂದು ದೂರು ದಾಖಲಾಗಿತ್ತು. ಪಬ್ ಜಿ ಆಟ ಆಡುತ್ತಿದ್ದವಳು ಮಟ ಮಟ ಮಧ್ಯಾಹ್ನ ಮನೆ ಬಿಟ್ಟು ಹೋಗಿದ್ದು ಮನೆಯವರನ್ನೂ ಆತಂಕಕ್ಕೆ ಈಡು ಮಾಡಿತ್ತು. ತನಿಖೆ ಮಾಡಿದ ಪೊಲೀಸರು ಆಕೆಯನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮನೆಯೊಂದರಲ್ಲಿ ಪತ್ತೆ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಮುಗಿಸಿ ಡಿಪ್ಲೊಮಾ ಸೇರಿದ್ದ ಕ್ಯಾಲಿಸ್ಟಾ ಫೆರಾವೋ ನಾಪತ್ತೆಯಾಗಿದ್ದ ಹುಡುಗಿ. ಬರ್ಕೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಿಜೈನಿಂದ ಆಟೋದಲ್ಲಿ ಕೆಎಸ್ಸಾರ್ಟಿಸಿಗೆ ಹೋಗಿರುವುದು ಕಂಡುಬಂದಿತ್ತು. ಆಕೆ ಮೊಬೈಲ್ ಒಯ್ದಿದ್ದರೂ, ಅದರಲ್ಲಿ ಸಿಮ್ ಇರಲಿಲ್ಲ. ಹುಡುಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಳು ಎಂಬ ಮಾಹಿತಿ ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಗೆಳೆಯ- ಗೆಳತಿಯರ ಮಾಹಿತಿ ಸಂಗ್ರಹಿಸಿದ್ದರು. 3 ಸಾವಿರ ಇನ್ಸ್ ಟಾ ಗೆಳೆಯರ ಖಾತೆಗಳು ಮತ್ತು ಮೋಜಾ ಏಪ್ ಖಾತೆಯ ಪರಿಶೀಲನೆ ವೇಳೆ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ವೇಳೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೂರಜ್ ಪೂಜಾರಿ ಎಂಬ 23 ವರ್ಷದ ಯುವಕನ ಮಾಹಿತಿ ಪಡೆದು ಅಲ್ಲಿ ಪರಿಶೀಲನೆ ನಡೆಸಿದಾಗ, ಕಾಣೆಯಾದ ಹುಡುಗಿ ಅಲ್ಲಿರುವುದು ಪತ್ತೆಯಾಗಿದೆ. ಪೊಲೀಸರು ಇಬ್ಬರನ್ನೂ ಬರ್ಕೆ ಠಾಣೆಗೆ ಕರೆತಂದಿದ್ದು, ನಾವಿಬ್ಬರೂ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹುಡುಗಿ ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥಳಿಲ್ಲದೆ ಇರುವುದು ಕಂಡುಬಂದಿದೆ. ಆದರೆ ಹುಡುಗಿ ತಾನು ತಂದೆ, ತಾಯಿ ಜೊತೆಗೆ ಹೋಗುವುದಿಲ್ಲ ಎಂದು ತಿಳಿಸಿದ್ದರಿಂದ ಪೊಲೀಸರು ಸ್ವಾಧಾರ ಕೇಂದ್ರಕ್ಕೆ ಸೇರಿಸಿದ್ದಾರೆ.
An 18-year-old girl who was missing from bejai in Mangalore is now found in karkala with her boyfriend after love in Instagram. Barke police who has registered missing case have now found her in her boyfriends house.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm