ಬ್ರೇಕಿಂಗ್ ನ್ಯೂಸ್
06-08-24 01:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಬಿಜೈ ನಿವಾಸಿ 18 ವರ್ಷದ ಹುಡುಗಿಯೊಬ್ಬಳು ದಿಢೀರ್ ಮನೆಯಿಂದ ಕಾಣೆಯಾಗಿದ್ದ ಬಗ್ಗೆ ಬರ್ಕೆ ಠಾಣೆಯಲ್ಲಿ ಜುಲೈ 30ರಂದು ದೂರು ದಾಖಲಾಗಿತ್ತು. ಪಬ್ ಜಿ ಆಟ ಆಡುತ್ತಿದ್ದವಳು ಮಟ ಮಟ ಮಧ್ಯಾಹ್ನ ಮನೆ ಬಿಟ್ಟು ಹೋಗಿದ್ದು ಮನೆಯವರನ್ನೂ ಆತಂಕಕ್ಕೆ ಈಡು ಮಾಡಿತ್ತು. ತನಿಖೆ ಮಾಡಿದ ಪೊಲೀಸರು ಆಕೆಯನ್ನು ಉಡುಪಿ ಜಿಲ್ಲೆಯ ಕಾರ್ಕಳದ ಮನೆಯೊಂದರಲ್ಲಿ ಪತ್ತೆ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಮುಗಿಸಿ ಡಿಪ್ಲೊಮಾ ಸೇರಿದ್ದ ಕ್ಯಾಲಿಸ್ಟಾ ಫೆರಾವೋ ನಾಪತ್ತೆಯಾಗಿದ್ದ ಹುಡುಗಿ. ಬರ್ಕೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಿಜೈನಿಂದ ಆಟೋದಲ್ಲಿ ಕೆಎಸ್ಸಾರ್ಟಿಸಿಗೆ ಹೋಗಿರುವುದು ಕಂಡುಬಂದಿತ್ತು. ಆಕೆ ಮೊಬೈಲ್ ಒಯ್ದಿದ್ದರೂ, ಅದರಲ್ಲಿ ಸಿಮ್ ಇರಲಿಲ್ಲ. ಹುಡುಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಳು ಎಂಬ ಮಾಹಿತಿ ಪಡೆದ ಪೊಲೀಸರು ಇನ್ ಸ್ಟಾ ಗ್ರಾಮ್ ಗೆಳೆಯ- ಗೆಳತಿಯರ ಮಾಹಿತಿ ಸಂಗ್ರಹಿಸಿದ್ದರು. 3 ಸಾವಿರ ಇನ್ಸ್ ಟಾ ಗೆಳೆಯರ ಖಾತೆಗಳು ಮತ್ತು ಮೋಜಾ ಏಪ್ ಖಾತೆಯ ಪರಿಶೀಲನೆ ವೇಳೆ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ವೇಳೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೂರಜ್ ಪೂಜಾರಿ ಎಂಬ 23 ವರ್ಷದ ಯುವಕನ ಮಾಹಿತಿ ಪಡೆದು ಅಲ್ಲಿ ಪರಿಶೀಲನೆ ನಡೆಸಿದಾಗ, ಕಾಣೆಯಾದ ಹುಡುಗಿ ಅಲ್ಲಿರುವುದು ಪತ್ತೆಯಾಗಿದೆ. ಪೊಲೀಸರು ಇಬ್ಬರನ್ನೂ ಬರ್ಕೆ ಠಾಣೆಗೆ ಕರೆತಂದಿದ್ದು, ನಾವಿಬ್ಬರೂ ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹುಡುಗಿ ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥಳಿಲ್ಲದೆ ಇರುವುದು ಕಂಡುಬಂದಿದೆ. ಆದರೆ ಹುಡುಗಿ ತಾನು ತಂದೆ, ತಾಯಿ ಜೊತೆಗೆ ಹೋಗುವುದಿಲ್ಲ ಎಂದು ತಿಳಿಸಿದ್ದರಿಂದ ಪೊಲೀಸರು ಸ್ವಾಧಾರ ಕೇಂದ್ರಕ್ಕೆ ಸೇರಿಸಿದ್ದಾರೆ.
An 18-year-old girl who was missing from bejai in Mangalore is now found in karkala with her boyfriend after love in Instagram. Barke police who has registered missing case have now found her in her boyfriends house.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am