ಬ್ರೇಕಿಂಗ್ ನ್ಯೂಸ್
06-08-24 07:25 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.6: ದೇಶದ ಗಮನಸೆಳೆದು ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮಂಗಳೂರಿನ ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣದಲ್ಲಿ ಹಿಂದು ಜಾಗರಣ ವೇದಿಕೆಯ ಸುಭಾಸ್ ಪಡೀಲ್ ಸೇರಿದಂತೆ ಎಲ್ಲ 39 ಆರೋಪಿಗಳನ್ನು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಖುಲಾಸೆಗೊಳಿಸಿದೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ವಿ ಕಾಂತರಾಜು 12 ವರ್ಷಗಳ ಬಳಿಕ ಮಹತ್ವದ ತೀರ್ಪು ನೀಡಿದ್ದಾರೆ.
2012ರ ಜುಲೈ 28ರಂದು ರಾತ್ರಿ ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆದಿತ್ತು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದರು. ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ, ಯುವತಿಯರ ಮೇಲೆ ತಂಡ ದಾಳಿಗೈದು ಹಲ್ಲೆ ನಡೆಸಿತ್ತು. ಹೋಮ್ ಸ್ಟೇಯಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ದಾಳಿ ನಡೆಸಲಾಗಿತ್ತು. ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಪತ್ರಕರ್ತರು ಸೇರಿ 40ಕ್ಕೂ ಹೆಚ್ಚು ಮಂದಿ ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದರು.


ಘಟನೆ ಬಗ್ಗೆ ತನಿಖೆ ನಡೆಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. 44 ಆರೋಪಿಗಳ ಪೈಕಿ ಮೂವರು ವಿಚಾರಣೆ ಸಂದರ್ಭದಲ್ಲೇ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಸೇರ್ಪಡೆಗೊಂಡಿದ್ದ ಪತ್ರಕರ್ತ ನವೀನ್ ಸೂರಿಂಜೆಯನ್ನು ನ್ಯಾಯಾಲಯ ವಿಚಾರಣೆ ನಡುವಲ್ಲೇ ಪ್ರಕರಣದಿಂದ ಕೈಬಿಟ್ಟಿತ್ತು. ಕಳೆದ ಬಾರಿ ಸಿದ್ದರಾಮಯ್ಯ ಸರ್ಕಾರ ಇದ್ದಾಗ ನವೀನ್ ಸೂರಿಂಜೆ ಮೇಲಿನ ಕೇಸನ್ನು ವಾಪಸ್ ಪಡೆಯಲಾಗಿತ್ತು.
ಐದು ಹುಡುಗಿಯರು ಸೇರಿದಂತೆ 12 ಮಂದಿಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದು ಭಾರೀ ಟೀಕೆಗೆ ಗುರಿಯಾಗಿತ್ತು. ಬಳಿಕ ಮಹಿಳಾ ಆಯೋಗ ತನಿಖೆ ನಡೆಸಿ ಪೊಲೀಸ್ ವೈಫಲ್ಯದ ಬಗ್ಗೆ ಗೃಹ ಸಚಿವರಿಗೆ ವರದಿ ನೀಡಿತ್ತು. 12 ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೂಕ್ತ ಸಾಕ್ಷ್ಯಾಧಾರ ಕೊರತೆಯಿಂದಾಗಿ ಇತರೇ 39 ಆರೋಪಿಗಳನ್ನ ದೋಷಮುಕ್ತಗೊಳಿಸಿ ಮಂಗಳವಾರ ಜಿಲ್ಲಾ ಕೋರ್ಟ್ ತೀರ್ಪು ನೀಡಿದೆ. ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿತ್ತು.
In a significant judgment, the Sixth Additional District and Sessions Court of Mangaluru has acquitted all the accused in the homestay illegal raid case of 2012.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am