ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am