ಬ್ರೇಕಿಂಗ್ ನ್ಯೂಸ್
07-08-20 03:36 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 7: ಕಾರು ಚಾಲಕನ ಅಚಾತುರ್ಯ, ನಿರ್ಲಕ್ಷ್ಯ ಎಂಥಾ ದುರ್ಘಟನೆಗೆ ಕಾರಣವಾಗುತ್ತೆ ಈ ಘಟನೆ ಸಾಕ್ಷಿ. ಸ್ಕೂಟರ್ ಡಿಕ್ಕಿಯಾಗಿ ಅದರಲ್ಲಿದ್ದ ಸವಾರೆ ಯುವತಿ ಕಾರಿನ ಮೇಲೆ ಬಾನೆಟಿಗೆ ಬಿದ್ದರೂ ಚಾಲಕ ನಿಲ್ಲಿಸದೆ ಮುಂದಕ್ಕೊಯ್ದಿದ್ದರಿಂದ ಯುವತಿಯ ಮೇಲಿಂದಲೇ ಕಾರು ಹರಿದ ಘಟನೆ ಮಂಗಳೂರಿನ ಕದ್ರಿ ಕಂಬ್ಳದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಘಟನೆ ನಡೆದಿದ್ದು ಕಾರಿನಡಿಗೆ ಬಿದ್ದ ಯುವತಿಯನ್ನು ವಾಣಿಶ್ರೀ (22) ಎಂದು ಗುರುತಿಸಲಾಗಿದೆ. ಬಿಜೈ ಕಡೆಯಿಂದ ಬರುತ್ತಿದ್ದ ಸ್ಕೂಟರಿಗೆ ಕದ್ರಿ ಕಡೆಯಿಂದ ಆಗಮಿಸುತ್ತಿದ್ದ ಕಾರು ಕದ್ರಿ ಕಂಬಳ ಸರ್ಕಲ್ ಬಳಿ ಡಿಕ್ಕಿಯಾಗಿದೆ. ಕಾರನ್ನು ಚಲಾಯಿಸುತ್ತಿದ್ದ ವೃದ್ಧ ವ್ಯಕ್ತಿ ಕಾರನ್ನು ನಿಲ್ಲಿಸಲಾಗದೆ ತಡಬಡಾಯಿಸಿದ್ದಾನೆ. ಕಾರಿನ ಮುಂಭಾಗದ ಬಾನೆಟ್ಟಿಗೆ ಬಿದ್ದ ಯುವತಿ ಬಳಿಕ ಉರುಳಿಕೊಂಡು ಮುಂದೆ ರಸ್ತೆಗೆ ಬಿದ್ದಿದ್ದಾಳೆ. ಆದರೆ, ಕಾರು ನೇರವಾಗಿ ಮುಂದಕ್ಕೆ ಬಂದಿದ್ದು ನೆಲಕ್ಕೆ ಬಿದ್ದ ಯುವತಿಯನ್ನು ತಳ್ಳಿಕೊಂಡೇ ಬಂದಿದೆ. ಯುವತಿಯ ದೇಹ ಕಾರಿನ ಮುಂಭಾಗದ ಎರಡು ಚಕ್ರದ ಮಧ್ಯೆ ಸಿಕ್ಕಿದ್ದು ಕೂಡಲೇ ಅಲ್ಲಿದ್ದ ಜನ ಕಾರಿಗೆ ಬಡಿದು ನಿಲ್ಲಿಸಿದ್ದಾರೆ. 2- 3 ಮೀಟರ್ ಉದ್ದಕ್ಕೆ ಎಳೆದೊಯ್ದ ಕಾರು ಚಾಲಕ ಬಳಿಕ ಯುವಕರ ಬೊಬ್ಬೆ ಕೇಳಿ ನಿಲ್ಲಿಸಿದ್ದಾನೆ. ಈ ಘಟನೆಯ ಪೂರ್ತಿ ದೃಶ್ಯ ಅಲ್ಲಿನ ಕಟ್ಟಡವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕಾರು ಚಾಲಕನ ಅವಾಂತರವನ್ನು ಹಿಡಿದಿಟ್ಟಿದೆ.
ಕಾರಿನ ಅಡಿಭಾಗದಲ್ಲಿ ಸಿಕ್ಕಿಕೊಂಡಿದ್ದ ಯುವತಿಯನ್ನು ಬಳಿಕ ಸ್ಥಳೀಯರು ಮತ್ತು ಒಬ್ಬ ಪೊಲೀಸ್ ಸಿಬಂದಿ ಸೇರಿ ಕಾರನ್ನು ಹಿಡಿದು ಎತ್ತುವ ಮೂಲಕ ಹೊರಕ್ಕೆಳೆದಿದ್ದಾರೆ.
Live Video:
ಇಡೀ ಘಟನೆ ಕಾರು ಚಾಲಕನ ಅಚಾತುರ್ಯವನ್ನು ಹಿಡಿದಿಟ್ಟಿದೆ. ಮುಂಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂದು ಕಾಣದೆ ಕಾರು ಚಲಾಯಿಸುವ ವೃದ್ಧ ಚಾಲಕರಿಂದಾಗುವ ಅನಾಹುತಕ್ಕೆ ಕನ್ನಡಿ ಹಿಡಿದಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm