ಬ್ರೇಕಿಂಗ್ ನ್ಯೂಸ್
07-08-20 03:36 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 7: ಕಾರು ಚಾಲಕನ ಅಚಾತುರ್ಯ, ನಿರ್ಲಕ್ಷ್ಯ ಎಂಥಾ ದುರ್ಘಟನೆಗೆ ಕಾರಣವಾಗುತ್ತೆ ಈ ಘಟನೆ ಸಾಕ್ಷಿ. ಸ್ಕೂಟರ್ ಡಿಕ್ಕಿಯಾಗಿ ಅದರಲ್ಲಿದ್ದ ಸವಾರೆ ಯುವತಿ ಕಾರಿನ ಮೇಲೆ ಬಾನೆಟಿಗೆ ಬಿದ್ದರೂ ಚಾಲಕ ನಿಲ್ಲಿಸದೆ ಮುಂದಕ್ಕೊಯ್ದಿದ್ದರಿಂದ ಯುವತಿಯ ಮೇಲಿಂದಲೇ ಕಾರು ಹರಿದ ಘಟನೆ ಮಂಗಳೂರಿನ ಕದ್ರಿ ಕಂಬ್ಳದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಘಟನೆ ನಡೆದಿದ್ದು ಕಾರಿನಡಿಗೆ ಬಿದ್ದ ಯುವತಿಯನ್ನು ವಾಣಿಶ್ರೀ (22) ಎಂದು ಗುರುತಿಸಲಾಗಿದೆ. ಬಿಜೈ ಕಡೆಯಿಂದ ಬರುತ್ತಿದ್ದ ಸ್ಕೂಟರಿಗೆ ಕದ್ರಿ ಕಡೆಯಿಂದ ಆಗಮಿಸುತ್ತಿದ್ದ ಕಾರು ಕದ್ರಿ ಕಂಬಳ ಸರ್ಕಲ್ ಬಳಿ ಡಿಕ್ಕಿಯಾಗಿದೆ. ಕಾರನ್ನು ಚಲಾಯಿಸುತ್ತಿದ್ದ ವೃದ್ಧ ವ್ಯಕ್ತಿ ಕಾರನ್ನು ನಿಲ್ಲಿಸಲಾಗದೆ ತಡಬಡಾಯಿಸಿದ್ದಾನೆ. ಕಾರಿನ ಮುಂಭಾಗದ ಬಾನೆಟ್ಟಿಗೆ ಬಿದ್ದ ಯುವತಿ ಬಳಿಕ ಉರುಳಿಕೊಂಡು ಮುಂದೆ ರಸ್ತೆಗೆ ಬಿದ್ದಿದ್ದಾಳೆ. ಆದರೆ, ಕಾರು ನೇರವಾಗಿ ಮುಂದಕ್ಕೆ ಬಂದಿದ್ದು ನೆಲಕ್ಕೆ ಬಿದ್ದ ಯುವತಿಯನ್ನು ತಳ್ಳಿಕೊಂಡೇ ಬಂದಿದೆ. ಯುವತಿಯ ದೇಹ ಕಾರಿನ ಮುಂಭಾಗದ ಎರಡು ಚಕ್ರದ ಮಧ್ಯೆ ಸಿಕ್ಕಿದ್ದು ಕೂಡಲೇ ಅಲ್ಲಿದ್ದ ಜನ ಕಾರಿಗೆ ಬಡಿದು ನಿಲ್ಲಿಸಿದ್ದಾರೆ. 2- 3 ಮೀಟರ್ ಉದ್ದಕ್ಕೆ ಎಳೆದೊಯ್ದ ಕಾರು ಚಾಲಕ ಬಳಿಕ ಯುವಕರ ಬೊಬ್ಬೆ ಕೇಳಿ ನಿಲ್ಲಿಸಿದ್ದಾನೆ. ಈ ಘಟನೆಯ ಪೂರ್ತಿ ದೃಶ್ಯ ಅಲ್ಲಿನ ಕಟ್ಟಡವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕಾರು ಚಾಲಕನ ಅವಾಂತರವನ್ನು ಹಿಡಿದಿಟ್ಟಿದೆ.
ಕಾರಿನ ಅಡಿಭಾಗದಲ್ಲಿ ಸಿಕ್ಕಿಕೊಂಡಿದ್ದ ಯುವತಿಯನ್ನು ಬಳಿಕ ಸ್ಥಳೀಯರು ಮತ್ತು ಒಬ್ಬ ಪೊಲೀಸ್ ಸಿಬಂದಿ ಸೇರಿ ಕಾರನ್ನು ಹಿಡಿದು ಎತ್ತುವ ಮೂಲಕ ಹೊರಕ್ಕೆಳೆದಿದ್ದಾರೆ.
Live Video:
ಇಡೀ ಘಟನೆ ಕಾರು ಚಾಲಕನ ಅಚಾತುರ್ಯವನ್ನು ಹಿಡಿದಿಟ್ಟಿದೆ. ಮುಂಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂದು ಕಾಣದೆ ಕಾರು ಚಲಾಯಿಸುವ ವೃದ್ಧ ಚಾಲಕರಿಂದಾಗುವ ಅನಾಹುತಕ್ಕೆ ಕನ್ನಡಿ ಹಿಡಿದಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm