ಬ್ರೇಕಿಂಗ್ ನ್ಯೂಸ್
08-08-24 07:16 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ಎಡಕುಮೇರಿ- ಕಡಗರವಳ್ಳಿ ನಡುವೆ ಭೂಕುಸಿತದಿಂದ ಮಂಗಳೂರು- ಬೆಂಗಳೂರು ನಡುವೆ ರೈಲು ಸಂಚಾರಕ್ಕೆ ತೊಡಕಾಗಿತ್ತು. ಎರಡು ವಾರಗಳ ಸತತ ಪ್ರಯತ್ನದ ಬಳಿಕ ಭೂಕುಸಿತ ಪ್ರದೇಶದಲ್ಲಿ ರೈಲು ಹಳಿಯನ್ನು ಸರಿಪಡಿಸಲಾಗಿದ್ದು, ಆಗಸ್ಟ್ 8ರಿಂದ ಎಂದಿನಂತೆ ರೈಲುಗಳ ಸಂಚಾರಕ್ಕೆ ತೆರೆದುಕೊಂಡಿದೆ. ಅತ್ತ ಶಿರಾಡಿ ಹೆದ್ದಾರಿ ಓಪನ್ ಆದ ಬೆನ್ನಲ್ಲೇ ರೈಲು ಸಂಚಾರವೂ ಆರಂಭಗೊಂಡಂತಾಗಿದ್ದು, ಬಸ್ಸುಗಳ ಮಿತಿಮೀರಿದ ದರದಿಂದಾಗಿ ದಣಿದಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಸುಬ್ರಹ್ಮಣ್ಯ – ಸಕಲೇಶಪುರದ ರೈಲು ಹಳಿಯಲ್ಲಿ ಭೂಕುಸಿತ ಉಂಟಾಗಿದ್ದರಿಂದ ಜುಲೈ 26ರ ಬಳಿಕ ಈ ಹಾದಿಯಲ್ಲಿ ರೈಲು ಸಂಚಾರವನ್ನು ನಿಲ್ಲಿಸಲಾಗಿತ್ತು. ದಕ್ಷಿಣ ರೈಲ್ವೇ ಮತ್ತು ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳ ಜಂಟಿ ಪ್ರಯತ್ನ, ದಿನದಲ್ಲಿ 200ಕ್ಕೂ ಹೆಚ್ಚು ಸಿಬಂದಿಗಳ ಕಾರ್ಯಾಚರಣೆಯ ಬಳಿಕ ಗುಡ್ಡ ಕುಸಿತ ಆಗಿರುವಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ಅಲ್ಲದೆ, ಹಳಿಯ ಬದಿಗೆ ಹೆಚ್ಚುವರಿಯಾಗಿ ಕಾಂಕ್ರೀಟ್ ಸ್ಲಾಬ್ ಗಳನ್ನು ಜೋಡಿಸಲಾಗಿದೆ. ಆಗಸ್ಟ್ 4ರಂದು ಬಹುತೇಕ ಕೆಲಸ ಮುಗಿದಿದ್ದು, ಗೂಡ್ಸ್ ರೈಲು ಸಾಗುವುದಕ್ಕೆ ರೈಲ್ವೇ ಅಧಿಕಾರಿಗಳು ಹಸಿರು ನಿಶಾನೆ ನೀಡಿದ್ದರು. ಆನಂತರ, ಭಾರದ ಎಂಜಿನಗಳನ್ನು ಆ ದಾರಿಯಲ್ಲಿ ಸಾಗಿಸಲಾಗಿತ್ತು.



ಆಗಸ್ಟ್ 6ರಂದು ಫುಲ್ ಲೋಡ್ ಆಗಿದ್ದ ಗೂಡ್ಸ್ ರೈಲೊಂದನ್ನು ಇದೇ ಹಾದಿಯಲ್ಲಿ ಸಾಗಿಸಲಾಗಿದ್ದು, ಮಳೆಯ ನಡುವೆಯೂ ಯಶಸ್ವಿಯಾಗಿ ಹಳಿಯಲ್ಲಿ ಸಾಗಿ ಹೋಗಿದೆ. ಮುಂಜಾಗ್ರತಾ ಕ್ರಮವಾಗಿ ರೈಲಿನ ವೇಗವನ್ನು ಗಂಟೆಗೆ 15 ಕಿಮೀಗೆ ಇಳಿಸಲಾಗಿತ್ತು. ಆಗಸ್ಟ್ 8ರ ಗುರುವಾರ ಮಧ್ಯಾಹ್ನ ಯಶವಂತಪುರ- ಮಂಗಳೂರು ಜಂಕ್ಷನ್ ರೈಲು ಸಕಲೇಶಪುರ ಹಳಿಯ ಮೂಲಕ ಸಾಗಿದ್ದು, ಪ್ಯಾಸೆಂಜರ್ ರೈಲು ಸಾಗುವುದಕ್ಕೆ ಅಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದಿನಿಂದ ಎಲ್ಲ ನಿಗದಿತ ರೈಲುಗಳು ಎಂದಿನಂತೆ ಮಂಗಳೂರು – ಬೆಂಗಳೂರು ಮಧ್ಯೆ ಸಂಚಾರ ಆರಂಭಿಸಲಿದೆ ಎಂದು ಸೌತ್ ವೆಸ್ಟರ್ನ್ ರೈಲ್ವೇಯ ಚೀಫ್ ಪಬ್ಲಿಕ್ ರಿಲೇಶನ್ ಆಫೀಸರ್ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.
The South Western Railway (SWR) on Thursday (August 8, 2024), resumed passenger train services on the Bengaluru-Mangaluru sector by safely passing Train No. 16575 Yeshwantpur-Mangaluru Junction Gomateshwara tri-weekly Express, after restoring the landslip-affected stretch on Sakelshpur-Subrahmanya Road Ghat section.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am