ಬ್ರೇಕಿಂಗ್ ನ್ಯೂಸ್
09-08-24 10:56 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬೀದಿಬದಿ ವ್ಯಾಪಾರಿಗಳ ವಿರುದ್ಧ ಕಳೆದ 10 ದಿನಗಳಿಂದ ಟೈಗರ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಇದರಿಂದ ಬೀದಿ ಬದಿ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಪ್ರತಿಭಟನೆ ನಡೆಸುತ್ತ ಬಂದಿದೆ. ಇದರ ಪರಿಣಾಮ ಎಂಬಂತೆ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ವ್ಯಾಪಾರಿ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಟೈಗರ್ ಕಾರ್ಯಾಚರಣೆ ವಿರುದ್ಧ ಆಗಸ್ಟ್ 7ರಂದು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಮೇಯರ್ ಮತ್ತು ಪಾಲಿಕೆಯ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಬೀದಿಬದಿ ವ್ಯಾಪಾರಿಗಳ ಜೊತೆಗೆ ಸಭೆ ನಡೆಸಿದ್ದು ಐಡಿ ಕಾರ್ಡ್ ನೀಡುವ ಬಗ್ಗೆ ಪ್ರಸ್ತಾಪ ಇಟ್ಟಿದ್ದಾರೆ.
ಇದಕ್ಕೆ ವ್ಯಾಪಾರಿಗಳು ಒಪ್ಪಿಗೆ ನೀಡಿದ್ದು, 667 ಮಂದಿ ಬೀದಿ ವ್ಯಾಪಾರಿಗಳಿಗೆ ಐಡಿ ಕಾರ್ಡ್ ವಿತರಣೆ ಮತ್ತು ಬೀದಿ ವ್ಯಾಪಾರ ವಲಯ ರಚನೆ ಮಾಡಲು ಆಗಸ್ಟ್ 19 ವರೆಗೆ ಮೇಯರ್ ಕಾಲಾವಕಾಶ ಕೇಳಿದ್ದಾರೆ. ಇದೇ ವೇಳೆ, ಸಂಘದ ಗೌರವಾಧ್ಯಕ್ಷ ಬಿಕೆ ಇಮ್ತಿಯಾಜ್, ವ್ಯಾಪಾರ ವಲಯ ಮತ್ತು ಐಡಿ ಕಾರ್ಡ್ ವಿತರಣೆ ಮಾಡುವವರೆಗೆ ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕೆಂದು ಮೇಯರ್ ಅವರನ್ನು ಒತ್ತಾಯಿಸಿದರು.
ಇದಲ್ಲದೆ, ಆಹಾರ ಮಾರಾಟ ಮಾಡುವ ವ್ಯಾಪಾರಿಗಳಿಗೆ ಸಂಜೆ 4ರಿಂದ ರಾತ್ರಿ 11ರ ವರೆಗೆ ಅವಕಾಶ ನೀಡುವಂತೆ ಕೋರಲಾಯಿತು. ಎಲ್ಲದಕ್ಕೂ ಆಗಸ್ಟ್ 19ರ ವರೆಗೆ ಕಾಯಿರಿ, ಅದರೊಳಗೆ ವ್ಯವಸ್ಥೆ ಮಾಡುವುದು ನಮ್ಮಿಂದ ಸಾಧ್ಯ ಆಗದಿದ್ದರೆ ಯಥಾಸ್ಥಿತಿ ವ್ಯಾಪಾರ ಮುಂದುವರಿಸಿ ಎಂದು ಮೇಯರ್ ತಿಳಿಸಿದ್ದಾರೆ ಎಂಬುದಾಗಿ ಡಿವೈಎಫ್ಐ ಪ್ರತಿನಿಧಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಸಂಘದ ಮುಖಂಡರಾದ ಶ್ರೀನಿವಾಸ್ ಕಾವೂರು, ಗೋಪಾಲ್, ಅನಿಲ್, ರಹಿಮಾನ್ ಮುಂತಾದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
The Street Traders Welfare Association has been protesting against the hawkers for the past 10 days because of the ongoing Tiger Operation, which is robbing the street hawkers of their right to live. As a result of this, Corporation Mayor Sudhir Shetty has held talks with Kannur business representatives.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm