ಬ್ರೇಕಿಂಗ್ ನ್ಯೂಸ್
10-08-24 12:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿಯಾಗಲ್ಲ ಎಂಬುದು ಬಹಳಷ್ಟು ಬಾರಿ ಸಾಬೀತಾಗಿದೆ. ಇದಕ್ಕೊಂದು ಸೇರ್ಪಡೆ ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆ. ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಲ್ಲಿ ಮಂಗಳೂರಿನ ಡಾ| ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ನೆರವೇರಿದೆ.




ಮಂಗಳೂರಿನ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. 2019ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. 2023ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
In a heartwarming celebration of love transcending borders, a Mangalurean man and a Brazilian woman were married on Thursday, August 8, at T V Raman Pai Hall. This union not only marks the culmination of a five-year courtship but also beautifully blends two rich and diverse cultures, creating a joyous occasion that has touched many hearts.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm