ಬ್ರೇಕಿಂಗ್ ನ್ಯೂಸ್
12-08-24 08:14 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಮಟ್ಟದ ಛಾಪನ್ನು ಮೂಡಿಸಿದ ಮಂಗಳೂರಿನ ಫಳ್ನೀರಿನ ಇಂದಿರಾ ಆಸ್ಪತ್ರೆ 25ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದು ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಕಾರ್ಯಕ್ರಮ ಹಮ್ಮಿಕೊಂಡಿದೆ. 25 ವರ್ಷಗಳಲ್ಲಿ ಆಸ್ಪತ್ರೆ ಜೊತೆಗೆ ನರ್ಸಿಂಗ್ ಕಾಲೇಜು ಬೃಹತ್ತಾಗಿ ಮತ್ತು ಅತ್ಯಾಧುನಿಕ ವೈದ್ಯಕೀಯ ಕೇಂದ್ರವಾಗಿ ಬೆಳೆದು ನಿಂತಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಸಯ್ಯದ್ ನಿಜಾಮುದ್ದೀನ್ ಹೇಳಿದರು.
1999ರಲ್ಲಿ ಸ್ಥಾಪನೆಯಾದಾಗಿನಿಂದ ಆಸ್ಪತ್ರೆ ಸಾರ್ವಜನಿಕರಿಗೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುತ್ತ ಬಂದಿದೆ. ತುರ್ತು ಆರೈಕೆ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಮೆಟರ್ನಿಟಿ, ಮೆಡಿಸಿನ್, ಫಿಸಿಯೋಥೆರಪಿ ಸೇರಿದಂತೆ ವಿಶಾಲವಾದ ಸೇವೆಗಳನ್ನು ಒದಗಿಸುತ್ತಿದೆ. ಇದರ ಜೊತೆಗೆ, ಇಂದಿರಾ ಎಜ್ಯುಕೇಶನಲ್
ಟ್ರಸ್ಟ್ ಆರಂಭಿಸಿದ್ದು ನರ್ಸಿಂಗ್, ಅಲೈಡ್ ಸೈನ್ಸ್ ಮತ್ತು ಫಿಸಿಯೋಥೆರಪಿ ಕೋರ್ಸ್ಗಳನ್ನು ನೀಡುತ್ತಿದ್ದೇವೆ. 60 ವಿದ್ಯಾರ್ಥಿಗಳಿಂದ ಆರಂಭಗೊಂಡ ನಮ್ಮ ಕಾಲೇಜಿನಲ್ಲಿ ಈಗ ವಿವಿಧ 12 ವಿಭಾಗದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ನೀಡುತ್ತಿದ್ದು 1200 ವಿದ್ಯಾರ್ಥಿಗಳಿದ್ದಾರೆ ಎಂದವರು ಹೇಳಿದರು.


ಇಂದಿರಾ ಆಸ್ಪತ್ರೆ ತನ್ನ ಗೌರವಾನ್ವಿತ ವೈದ್ಯರು ಮತ್ತು ಸಿಬ್ಬಂದಿಯ ಕೊಡುಗೆಗಳನ್ನು ಗೌರವಿಸಲು ವಾರ್ಷಿಕೋತ್ಸವ ಸಂಭ್ರಮ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸಮುದಾಯ ಆರೋಗ್ಯವನ್ನು ಬೆಂಬಲಿಸಲು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. 25ನೇ ವಾರ್ಷಿಕೋತ್ಸವ ಆಚರಣೆ ಆ.15 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ನನ್ ಸೆಂಟರ್ನಲ್ಲಿ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಯೆನೆಪೋಯ ವಿಶ್ವವಿದ್ಯಾಲಯದ ಗೌರವ ಕುಲಪತಿ ಡಾ.ಅಬ್ದುಲ್ಲಾ ಕುಂಞ ಮತ್ತು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ನೋಂದಣಾಧಿಕಾರಿ ಡಾ.ರಿಯಾಜ್ ಬಾಷಾ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಸಯ್ಯದ್ ಜಮಾಲುದ್ದೀನ್, ಅಶ್ರಫ್ ಉಪಸ್ಥಿತರಿದ್ದರು.
Mangalore Falnir Indira hospital to celebrate 25th anniversary, medical college which started with 60 students has now reached having 1200 students.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm