ಬ್ರೇಕಿಂಗ್ ನ್ಯೂಸ್
13-08-24 12:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ರಾಜ್ಯ ಶಿಕ್ಷಣ ಇಲಾಖೆ ಅನುದಾನ ರಹಿತ ಖಾಸಗಿ ಶಾಲೆಗಳ ಮೇಲೆ ಸವಾರಿ ನಡೆಸುತ್ತಿದ್ದು ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿನಾಕಾರಣ ಖಾಸಗಿ ಸಂಸ್ಥೆಗಳಿಗೆ ತೊಂದರೆ ನೀಡುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಆ.21ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಒಂದು ದಿನ ಶಾಲೆ ಮುಚ್ಚಿ ಆಡಳಿತ ಮಂಡಳಿ, ಶಾಲಾ ಸಿಬಂದಿ, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ “ಬೆಂಗಳೂರು ಚಲೋ’ ನಡೆಸಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ )ಕರ್ನಾಟಕದ ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುಮಾರು 64 ಮಾಹಿತಿಗಳನ್ನು ಒದಗಿಸಬೇಕಾಗಿದ್ದು, ಇವುಗಳಿಗೆ ಭಾರೀ ಶುಲ್ಕ ಪಾವತಿಸಬೇಕಾಗಿದೆ. ಅದರಲ್ಲೂ ಅಗ್ನಿ ಸುರಕ್ಷೆ ಬಗ್ಗೆ ದೃಢೀಕರಣ, ಕಟ್ಟಡ ಸುರಕ್ಷೆ ದೃಢೀಕರಣ ಹಾಗೂ ಶಾಲಾ ಕಟ್ಟಡವಿರುವ ನಿವೇಶನವು ಶೈಕ್ಷಣಿಕ ಉದ್ದೇಶಕ್ಕೆ ಭೂ ಪರಿವರ್ತನಾ ಆದೇಶ ಇವುಗಳು ಖಾಸಗಿಯವರಿಗೆ ತೀವ್ರ ಸಂಕಷ್ಟ ತಂದಿದೆ. ಅವುಗಳನ್ನು ಸಡಿಲಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರಕಾರ ತಿರಸ್ಕರಿಸಿದೆ ಎಂದು ಆರೋಪಿಸಿದರು.
ಯಾವುದೇ ಜಾಗದಲ್ಲಿ ಶಾಲೆಗೆ ಕಟ್ಟಡವಿದ್ದರೂ ತೆರಿಗೆ ವಿಧಿಸುವಂತಿಲ್ಲ. ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಕೋರ್ಟ್ ಆದೇಶವಿದೆ. ಆದರೂ ತೆರಿಗೆ ವಸೂಲಾತಿ ನಡೆಸಲಾಗುತ್ತಿದೆ. ಮನವಿ ಸಲ್ಲಿಸಿ ಮೇಲಧಿಕಾರಿಗಳು ಒಪ್ಪಿದರೂ ಕಾರ್ಯಗತವಾಗುವುದಿಲ್ಲ. ಅಲ್ಲದೆ, ತೆರಿಗೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ.ಕ., ಉಡುಪಿ ಘಟಕದ ಜಿಲ್ಲಾಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣಕರ್ ಮಾತನಾಡಿ, ಸರಕಾರಿ ಶಾಲೆಗಳಿಗೊಂದು ಖಾಸಗಿ ಶಾಲೆಗಳಿಗೊಂದು ನೀತಿಯನ್ನು ಇಲಾಖೆ ಅನುಸರಿಸುತ್ತಿರುವುದು ಸರಿಯಲ್ಲ. ಶಾಲಾ ಕಟ್ಟಡವಿರುವ ನಿವೇಶನದ ಭೂ ಪರಿವರ್ತನಾ ಆದೇಶದ ಬಗ್ಗೆ ವಿನಾಯಿತಿ ನೀಡಬೇಕು. ಅಲ್ಲದೆ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಿಸಿ ಆಯ್ದ ಮಕ್ಕಳನ್ನು ಟ್ಯೂಷನ್ ನೀಡುತ್ತಿರುವ ಟ್ಯುಟೋರಿಯಲ್ ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
Mangalore Puranik says private school face renewal issues, warns of Bangalore chalo
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm