ಬ್ರೇಕಿಂಗ್ ನ್ಯೂಸ್
13-08-24 12:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ರಾಜ್ಯ ಶಿಕ್ಷಣ ಇಲಾಖೆ ಅನುದಾನ ರಹಿತ ಖಾಸಗಿ ಶಾಲೆಗಳ ಮೇಲೆ ಸವಾರಿ ನಡೆಸುತ್ತಿದ್ದು ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿನಾಕಾರಣ ಖಾಸಗಿ ಸಂಸ್ಥೆಗಳಿಗೆ ತೊಂದರೆ ನೀಡುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಆ.21ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಒಂದು ದಿನ ಶಾಲೆ ಮುಚ್ಚಿ ಆಡಳಿತ ಮಂಡಳಿ, ಶಾಲಾ ಸಿಬಂದಿ, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ “ಬೆಂಗಳೂರು ಚಲೋ’ ನಡೆಸಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ )ಕರ್ನಾಟಕದ ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುಮಾರು 64 ಮಾಹಿತಿಗಳನ್ನು ಒದಗಿಸಬೇಕಾಗಿದ್ದು, ಇವುಗಳಿಗೆ ಭಾರೀ ಶುಲ್ಕ ಪಾವತಿಸಬೇಕಾಗಿದೆ. ಅದರಲ್ಲೂ ಅಗ್ನಿ ಸುರಕ್ಷೆ ಬಗ್ಗೆ ದೃಢೀಕರಣ, ಕಟ್ಟಡ ಸುರಕ್ಷೆ ದೃಢೀಕರಣ ಹಾಗೂ ಶಾಲಾ ಕಟ್ಟಡವಿರುವ ನಿವೇಶನವು ಶೈಕ್ಷಣಿಕ ಉದ್ದೇಶಕ್ಕೆ ಭೂ ಪರಿವರ್ತನಾ ಆದೇಶ ಇವುಗಳು ಖಾಸಗಿಯವರಿಗೆ ತೀವ್ರ ಸಂಕಷ್ಟ ತಂದಿದೆ. ಅವುಗಳನ್ನು ಸಡಿಲಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರಕಾರ ತಿರಸ್ಕರಿಸಿದೆ ಎಂದು ಆರೋಪಿಸಿದರು.
ಯಾವುದೇ ಜಾಗದಲ್ಲಿ ಶಾಲೆಗೆ ಕಟ್ಟಡವಿದ್ದರೂ ತೆರಿಗೆ ವಿಧಿಸುವಂತಿಲ್ಲ. ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಕೋರ್ಟ್ ಆದೇಶವಿದೆ. ಆದರೂ ತೆರಿಗೆ ವಸೂಲಾತಿ ನಡೆಸಲಾಗುತ್ತಿದೆ. ಮನವಿ ಸಲ್ಲಿಸಿ ಮೇಲಧಿಕಾರಿಗಳು ಒಪ್ಪಿದರೂ ಕಾರ್ಯಗತವಾಗುವುದಿಲ್ಲ. ಅಲ್ಲದೆ, ತೆರಿಗೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ.ಕ., ಉಡುಪಿ ಘಟಕದ ಜಿಲ್ಲಾಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣಕರ್ ಮಾತನಾಡಿ, ಸರಕಾರಿ ಶಾಲೆಗಳಿಗೊಂದು ಖಾಸಗಿ ಶಾಲೆಗಳಿಗೊಂದು ನೀತಿಯನ್ನು ಇಲಾಖೆ ಅನುಸರಿಸುತ್ತಿರುವುದು ಸರಿಯಲ್ಲ. ಶಾಲಾ ಕಟ್ಟಡವಿರುವ ನಿವೇಶನದ ಭೂ ಪರಿವರ್ತನಾ ಆದೇಶದ ಬಗ್ಗೆ ವಿನಾಯಿತಿ ನೀಡಬೇಕು. ಅಲ್ಲದೆ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಿಸಿ ಆಯ್ದ ಮಕ್ಕಳನ್ನು ಟ್ಯೂಷನ್ ನೀಡುತ್ತಿರುವ ಟ್ಯುಟೋರಿಯಲ್ ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
Mangalore Puranik says private school face renewal issues, warns of Bangalore chalo
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm