ಬ್ರೇಕಿಂಗ್ ನ್ಯೂಸ್
14-08-24 02:24 pm Mangalore Correspondent ಕರಾವಳಿ
ಉಳ್ಳಾಲ, ಆ.14: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿ ರಸ್ತೆಗೆಸೆಯಲ್ಪಟ್ಟಿದ್ದು, ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಸಾವನ್ನಪ್ಪಿದ ರಿಕ್ಷಾ ಚಾಲಕ. ಮಜೀದ್ ನಿನ್ನೆ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕ ಮಹಿಳೆಯರಿಬ್ಬರನ್ನ ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ಸಾಗುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿಗೆ ತಲುಪುತ್ತಿದ್ದಂತೆ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಚಾಲಕನಿಲ್ಲದ ರಿಕ್ಷಾವು ಮುಂದೆ ಚಲಿಸಿದ್ದು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ನಿತ್ಯಾನಂದ ಎಂಬವರ ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಆಟೋ ಕೊಂಚ ಮುಂದೆ ಚಲಿಸಿ ಹೆದ್ದಾರಿಗೆ ನುಗ್ಗುತ್ತಿದ್ದರೆ ಪ್ರಯಾಣಿಕ ಮಹಿಳೆಯರಿಬ್ಬರ ಪ್ರಾಣಕ್ಕೆ ಕಂಟಕ ಎದುರಾಗಲಿತ್ತೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ಆಕೆಯನ್ನ ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರಂತೆ.
ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ದಿನ ನಿತ್ಯವೂ ಬೆಳಗ್ಗೆ ಮತ್ತು ಸಾಯಂಕಾಲದ ವೇಳೆ ತನ್ನ ರಿಕ್ಷಾದಲ್ಲಿ ಮಕ್ಕಳ ಸ್ಕೂಲ್ ಟ್ರಿಪ್ ಮಾಡಿ ಬದುಕು ಸಾಗಿಸುತ್ತಿದ್ದರು. ಅವರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Auto driver gets heart attack while driving at kotekar, dies on spot. Two passengers escape unhurt. The deceased has been identified as Abdul Majeed native of Ullal.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm