ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm