ಬ್ರೇಕಿಂಗ್ ನ್ಯೂಸ್
15-08-24 09:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.15: ಕೆತ್ತಿಕಲ್ ಭೂಕುಸಿತ ಘಟನೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದ್ದು ಯಾವ ರೀತಿಯ ತಪ್ಪಾಗಿದೆ ಎನ್ನುವ ಬಗ್ಗೆ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು. ಆ ಜಾಗದಲ್ಲಿ 2019ರಿಂದಲೇ ಮಣ್ಣು ಎತ್ತಲಾಗಿದ್ದು, ಆವಾಗಿನಿಂದ ಅಧಿಕಾರಿಗಳು ಯಾರೆಲ್ಲ ಇದ್ದರು ಎನ್ನೋದನ್ನು ನೋಡಬೇಕಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿ ಸೂಚನೆಯಂತೆ ಎರಡು ಎಫ್ಐಆರ್ ರಿಜಿಸ್ಟರ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಈಗಾಗಲೇ ಎನ್ಐಟಿಕೆ ಮತ್ತು ಜಿಎಸ್ಐ ವತಿಯಿಂದ ಪ್ರತ್ಯೇಕವಾಗಿ ರಿಪೋರ್ಟ್ ಪಡೆದಿದ್ದೇವೆ. ಕುಸಿತ ತಡೆಯುವುದಕ್ಕೆ ಯಾವ ರೀತಿಯ ಕ್ರಮ ಆಗಬೇಕು ಎನ್ನುವ ವರದಿ ಕೇಳಿದ್ದೇವೆ ಎಂದು ಹೇಳಿದರು. ಇದೇ ವೇಳೆ, ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಡಿಬಿಎಲ್ ಕಂಪನಿ ಮತ್ತು ಖಾಸಗಿ ಭೂಮಾಲಕರ ಮೇಲೆ ಮೈನ್ಸ್ ಮತ್ತು ಜೀಯೋಲಜಿಯಿಂದ ಒಂದು ಎಫ್ಐಆರ್ ದಾಖಲು ಮಾಡಲಾಗಿದೆ. ನೀರು ಶೇಖರಣೆಯ ವೆಟ್ ವೆಲ್ ಗೆ ಅಪಾಯ ಆಗುವಂತೆ ನಡೆದುಕೊಂಡ ಬಗ್ಗೆ ಮಹಾನಗರ ಪಾಲಿಕೆಯಿಂದ ಇನ್ನೊಂದು ಎಫ್ಐಆರ್ ಮಾಡಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಪರಿಷ್ಕರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಪಕ್ಷದ ಯೋಜನೆಯಾಗಿದ್ದು ಬಡವರನ್ನು ಮೇಲೆತ್ತುವ ದೃಷ್ಟಿಯಿಂದ ಮಾಡಿರುವಂಥದ್ದು. ಅದರಲ್ಲಿ ಲೋಪ ಆಗಿದ್ದರೆ, ಶ್ರೀಮಂತರಿಗೂ ಯೋಜನೆಯ ಲಾಭ ಹೋಗುತ್ತಿದ್ದರೆ ಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡಬಹುದು. ಆದರೆ ಆ ರೀತಿ ಆಗುತ್ತಿರುವುದರ ಬಗ್ಗೆ ಸರ್ವೆಯಿಂದಷ್ಟೆ ತಿಳಿಯಬಹುದು ಎಂದು ಹೇಳಿದರು.
Mangalore Kethikal landslide, FIR against DBL company and private persons over negligence says Minister Dinesh Gundu Rao.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am