ಬ್ರೇಕಿಂಗ್ ನ್ಯೂಸ್
08-12-20 06:43 pm Mangalore Correspondent ಕರಾವಳಿ
ಬೆಂಗಳೂರು, ಡಿ.8: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಮುಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕಿಡುವ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಕೋಟ್ಯಾನ್, ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ, ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದವರು ಕೋಟಿ ಚೆನ್ನಯರು. ಅವಳಿ ವೀರರನ್ನು ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ದೇವರ ಸ್ಥಾನದಲ್ಲಿ ಪೂಜಿಸುತ್ತಾರೆ. ರಾಜ್ಯದ ಹೊರಗಿನಲ್ಲಿ 260ಕ್ಕೂ ಹೆಚ್ಚು ಗರಡಿಗಳನ್ನು ಸ್ಥಾಪನೆ ಮಾಡಿದ್ದರು. ಹೀಗಾಗಿ ಜಾತಿ, ಧರ್ಮದ ಭೇದ ಇಲ್ಲದೆ ಕೋಟಿ ಚೆನ್ನಯರು ಪೂಜೆಗೊಳ್ಳುತ್ತಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರುಷ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂಬ ಕರಾವಳಿ ಜನರ ಬಹುಕಾಲದ ಬೇಡಿಕೆಯನ್ನು ಸದನ ಮನ್ನಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಉಮಾನಾಥ ಕೋಟ್ಯಾನ್, ಜನಾಭಿಪ್ರಾಯಕ್ಕೆ ಸ್ಪಂದಿಸಿ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ ಎಂದು ಹೇಳಿದ್ದಾರೆ.
Mulky-Moodbidri MLA Umanath Kotian on Tuesday, December 8 urged the Karnataka Legislative Assembly speaker Vishweshwar Hegde Kageri to recommend the union government to name Mangaluru International Airport after Tulunadu Bravehearts Koti-Chennayya.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm