ಬ್ರೇಕಿಂಗ್ ನ್ಯೂಸ್
17-08-24 04:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕೊಲ್ಕೊತ್ತಾದಲ್ಲಿ ವೈದ್ಯ ಯುವತಿಯನ್ನು ಅತ್ಯಾಚಾರಗೈದು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ವೆನ್ಲಾಕ್ ಹಿಂಭಾಗದಲ್ಲಿರುವ ಭಾರತೀಯ ವೈದ್ಯರ ಸಂಘದ ಜಿಲ್ಲಾ ಘಟಕದ ಕಚೇರಿಯ ಬಳಿ ಸೇರಿದ ವೈದ್ಯರು ಬಳಿಕ ಹಂಪನಕಟ್ಟೆ, ಕ್ಲಾಕ್ ಟವರ್ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಶಾಂತಿಯುತ ನಡಿಗೆಯಲ್ಲಿ ಸಾಗಿದರು. ವೈದ್ಯರು, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಇತರ ಸಿಬಂದಿ ಸೇರಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಸಾಥ್ ಕೊಟ್ಟರು.
ಪ್ರತಿಭಟನಾ ಜಾಥಾದ ನಡುವೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಕೂಡ ಸಾಥ್ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದ ಗೇಟ್ ಬಳಿ ಪೊಲೀಸರು ತಡೆ ಹಾಕಿ, ಹತ್ತು ಮಂದಿಗಷ್ಟೇ ಜಿಲ್ಲಾಧಿಕಾರಿ ಬಳಿಗೆ ಹೋಗಲು ಅವಕಾಶ ನೀಡುತ್ತೇವೆಂದು ಹೇಳಿದರು. ಈ ವೇಳೆ, ಶಾಸಕರು ಮತ್ತು ವೈದ್ಯಕೀಯ ಸಂಘದ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ಕೆಲಹೊತ್ತು ಮಾತುಕತೆ ನಡೆಯಿತು. ಶಾಸಕರು ನಾವೆಲ್ಲ ಒಳಗಡೆ ಬರುತ್ತೇವೆ ಎಂದಾಗ, ಡಿಸಿಪಿ ಸಿದ್ಧಾರ್ಥ ಗೋಯಲ್ ಅವಕಾಶ ನೀಡಲಿಲ್ಲ. ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಬಂದು ವೈದ್ಯರ ಸಂಘದ ಮನವಿಯನ್ನು ಸ್ವೀಕರಿಸಿದರು.
ಇದೇ ವೇಳೆ, ಮಾಧ್ಯಮಕ್ಕೆ ಮಾತನಾಡಿದ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷೆ ಡಾ.ಜೆಸ್ಸಿ ಮರಿಯಾ ಡಿಸೋಜ, ಭಾರತವನ್ನು ಭಾರತ ಮಾತೆಯೆಂದು ಪೂಜಿಸುತ್ತೇವೆ. ತಾಯಿಗೆ ಪವಿತ್ರ ಸ್ಥಾನ ಕೊಟ್ಟ ದೇಶದಲ್ಲಿ ಮಹಿಳೆಗೆ ರಕ್ಷಣೆ ಇಲ್ಲದಾಗಿರುವುದು ದೌರ್ಭಾಗ್ಯ. ಯಾರು ಈ ಅಮಾನುಷ ಕೃತ್ಯ ಮಾಡಿದ್ದಾರೋ ಅವರಿಗೆ ತ್ವರಿತ ಗತಿಯಲ್ಲಿ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದರು. ವೈದ್ಯರ ಸಂಘದ ಡಾ.ರಂಜನ್ ಕಾಮತ್, ಡಾ.ಅವಿನ್ ಆಳ್ವ. ಡಾ.ಮಹಾಬಲ ಶೆಟ್ಟಿ ಮತ್ತಿತರರಿದ್ದರು.
The Indian Medical Association (IMA) Mangaluru Chapter, in collaboration with various voluntary organizations, organized a 'Silent March' on Saturday, August 17, to demand justice and protest against the recent murder of a doctor on duty in Kolkata.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm