ಬ್ರೇಕಿಂಗ್ ನ್ಯೂಸ್
17-08-24 05:30 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್.17: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತೆ ಸಾರ್ವಜನಿಕರ ಮಧ್ಯೆ ಮಾತಿಗೆ ಮಾತು ಬೆಳೆಸಿ ಬೆತ್ತಲಾಗಿದ್ದಾರೆ. ಮಳೆ ಹಾನಿ ಪೀಡಿತ ಪ್ರದೇಶಕ್ಕೆ ತಿಂಗಳ ನಂತರ ಬಂದಿದ್ದಾರೆಂದು ಸವಣಾಲು ಗ್ರಾಮದ ಸಾರ್ವಜನಿಕರು ಶಾಸಕರನ್ನು ತರಾಟೆಗೆತ್ತಿಕೊಂಡಿದ್ದು, ಈ ವೇಳೆ ಅನಗತ್ಯ ಮಾತುಗಳನ್ನಾಡಿ ತೀವ್ರ ಮುಜುಗರ ಅನುಭವಿಸಿದ್ದಾರೆ. ಸಾರ್ವಜನಿಕರು ಪ್ರಶ್ನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಮಳೆಯಿಂದಾಗಿ ಸವಣಾಲು ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ವಾಹನಗಳು ಸಂಚರಿಸದ ಸ್ಥಿತಿಯಾಗಿದೆ. ರಸ್ತೆ ದುಸ್ಥಿತಿಗೆ ಒಳಗಾಗಿದ್ದರೂ ಶಾಸಕರು ಸ್ಥಳಕ್ಕೆ ಬಂದಿಲ್ಲ ಎಂಬ ಸಿಟ್ಟಿನಲ್ಲಿ ಸ್ಥಳೀಯರಿದ್ದರು. ಬಿಜೆಪಿ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಶಾಸಕ ಹರೀಶ್ ಪೂಂಜಾ ಸ್ಥಳಕ್ಕೆ ಬಂದಿದ್ದರೆ, ಅಲ್ಲಿ ಸೇರಿದ್ದ ಸಾರ್ವಜನಿಕರು ಶಾಸಕರನ್ನು ಪ್ರಶ್ನೆ ಮಾಡಿದ್ದಾರೆ.
ರಸ್ತೆ ರಿಪೇರಿಗೆ ನನ್ನ ಕ್ಷೇತ್ರಾಭಿವೃದ್ಧಿ ಅನುದಾನದಿಂದ 5 ಲಕ್ಷ ಕೊಡುತ್ತೇನೆ, ಆದರೆ ಇಂಥ ನಾಯಿಗಳನ್ನು ನನ್ನ ಬಳಿಗೆ ಕರೆತರಬೇಡಿ ಅಂತ ತನ್ನ ಕಾರ್ಯಕರ್ತರಲ್ಲಿ ಶಾಸಕ ಹರೀಶ್ ಪೂಂಜಾ ಹೇಳಿದ್ದು, ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ. ಒಂದಷ್ಟು ಸಾರ್ವಜನಿಕರು ಮತ್ತು ಇನ್ನೊಂದಷ್ಟು ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದರು. ಇವರ ನಡುವೆಯೇ ಮಾತಿನ ಚಕಮಕಿ ನಡೆದಿದೆ. ನಿಮ್ಮ ಶಾಸಕ ಇದ್ದಾಗ ಯಾಕೆ ರಸ್ತೆ ಮಾಡಿಲ್ಲ ಎಂದು ಬಿಜೆಪಿಗರು ಕೇಳಿದರೆ, ನಿಮ್ಮ ಶಾಸಕ ಮತ್ತೆ ಯಾಕಿರೋದು ಈಗ ಎಂದು ಪ್ರಶ್ನೆ ಮಾಡಿದ್ದಾರೆ.
ಇದೇ ವೇಳೆ, ಶಾಸಕ ಹರೀಶ್ ಪೂಂಜಾ ಹೋಗೆಲೋ ಎಂದು ಏಕವಚನದಲ್ಲಿ ಹರಿಹಾಯ್ದಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಜೋರು ಧ್ವನಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಹೋಗೆಲೋ ಎನ್ನಲು ಇವನ್ಯಾರು. ನಾವು ಇದೇ ಊರಿನವರು. ನಮ್ಮ ಊರಿಗೆ ಬಂದು ಹೋಗು ಅನ್ನೋದಕ್ಕೆ ಇವ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಗೆ, ನಾನೊಬ್ಬ ಶಾಸಕ. ನೀವು ನನ್ನನ್ನು ಇಲ್ಲಿಗೆ ಬರಬಾರದು ಅಂತ ಹೇಳುವುದು ಸರಿಯಲ್ಲ. ಅಷ್ಟಕ್ಕೂ ನೀವು ನನ್ನ ಬಗ್ಗೆ ಆರೋಪ ಮಾಡಿದರೆ, ದೇವರಿಗೆ ಇಡುತ್ತೇನೆ. ದೇವರು ನೋಡಿಕೊಳ್ಳುತ್ತಾರೆ ಎಂದು ಹರೀಶ್ ಪೂಂಜಾ ಹೇಳಿದ್ದಾರೆ. ಇದಕ್ಕೆ ಸಾರ್ವಜನಿಕರು ಎಲ್ಲದಕ್ಕೂ ದೇವರನ್ನು ಎಳೆದು ತರುವ ಇವನೂ ಒಬ್ಬ ಶಾಸಕನಾ ಎಂದು ವ್ಯಂಗ್ಯವಾಡಿದ್ದಾರೆ.
#Belthangady Villagers slam MLA #HarishPoonja openly on his face, video goes viral on social media in #Mangalore #BreakingNews pic.twitter.com/JvkqhhsoTk
— Headline Karnataka (@hknewsonline) August 17, 2024
Belthangady Villagers slam MLA Harish Poonja openly on his face, video goes viral on social media. MLA who didn't even visit the villagers during rain was slammed by residents in singular words.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm