ಬ್ರೇಕಿಂಗ್ ನ್ಯೂಸ್
17-08-24 10:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆ ಹಾಗೂ ಸಂವಿಧಾನದ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ, ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.
"ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಶನಿವಾರ ನೀಡಿದ ಅನುಮತಿಯಿಂದ ಜನ ವಿರೋಧಿ ಭ್ರಷ್ಟ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸತ್ಯಕ್ಕೆ ಜಯ ಸಿಗಲೇಬೇಕು ಎನ್ನುವುದು ಅರ್ಥವಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಚಾರದ ಪ್ರಕರಣವಾಗಿರದೇ, ದುರ್ಬಲ, ಬಡ ವರ್ಗದ ಜನರಿಗೆ ಎಸಗಿರುವ ವಂಚನೆಯಾಗಿದೆ.

"ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ, ಸಣ್ಣದೊಂದು ಕಪ್ಪು ಚುಕ್ಕಿ ಇಲ್ಲದಂತೆ ರಾಜಕೀಯ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎನ್ನುವ ರೀತಿ ಸಾರ್ವಜನಿಕವಾಗಿ ಸಾರುತ್ತಾ ಬಂದಿರುವ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ರಾಜ್ಯದ ಜನತೆಗೆ ಮೋಸ ಮಾಡಿದ್ದಾರೆ"
"ಒಂದೆಡೆ ಕಾಂಗ್ರೆಸ್ ರಾಜ್ಯದ ಬೊಕ್ಕಸವನ್ನೇ ಖಾಲಿ ಮಾಡಿದ್ದು, ಮತ್ತೊಂದೆಡೆ ಬಡವರ ಹಕ್ಕುಗಳನ್ನು ನಿರ್ಲಕ್ಷಿಸಿ ತಮ್ಮ ಖಜಾನೆ ತುಂಬಿಸಿಕೊಂಡಿದೆ. ಇದು ಹಗಲು ದರೋಡೆಯಾಗಿದ್ದು, ಇನ್ನು ಮುಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯ ಪ್ರಭಾವ ಬೀರಿ ನುಣುಚಿಕೊಳ್ಳಲು ಸಾಧ್ಯವಿಲ್ಲ."
"ಪ್ರಜಾಪ್ರಭುತ್ವದ ಮೇಲೆ ಜನತೆಗಿರುವ ನಂಬಿಕೆ ಉಳಿಸಲು, ಸಿದ್ದರಾಮಯ್ಯ ಅವರು ಈ ಕೂಡಲೇ ಸಿಎಂ ಸ್ಥಾನ ತ್ಯಜಿಸುವ ಸಮಯ ಬಂದಿದ್ದು, ತಮ್ಮ ವಿರುದ್ದ ಕೇಳಿಬಂದಿರುವ ಎಲ್ಲಾ ಆರೋಪಗಳಿಗೆ ಜನತೆ ಮುಂದೆ ಉತ್ತರಿಸಲಿ" ಎಂದು ಸಂಸದ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
Mp Brijesh Chowta slams CM Siddaramaiah, says he must resign in Muda case. Karnataka Chief Minister Siddaramaiah faces a big challenge as the Governor has sanctioned his prosecution over alleged irregularities in the site allotment by the Mysuru Urban Development Authority (MUDA).
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm