ಬ್ರೇಕಿಂಗ್ ನ್ಯೂಸ್
17-08-24 10:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆ ಹಾಗೂ ಸಂವಿಧಾನದ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ, ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.
"ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಶನಿವಾರ ನೀಡಿದ ಅನುಮತಿಯಿಂದ ಜನ ವಿರೋಧಿ ಭ್ರಷ್ಟ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸತ್ಯಕ್ಕೆ ಜಯ ಸಿಗಲೇಬೇಕು ಎನ್ನುವುದು ಅರ್ಥವಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಚಾರದ ಪ್ರಕರಣವಾಗಿರದೇ, ದುರ್ಬಲ, ಬಡ ವರ್ಗದ ಜನರಿಗೆ ಎಸಗಿರುವ ವಂಚನೆಯಾಗಿದೆ.

"ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ, ಸಣ್ಣದೊಂದು ಕಪ್ಪು ಚುಕ್ಕಿ ಇಲ್ಲದಂತೆ ರಾಜಕೀಯ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎನ್ನುವ ರೀತಿ ಸಾರ್ವಜನಿಕವಾಗಿ ಸಾರುತ್ತಾ ಬಂದಿರುವ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ರಾಜ್ಯದ ಜನತೆಗೆ ಮೋಸ ಮಾಡಿದ್ದಾರೆ"
"ಒಂದೆಡೆ ಕಾಂಗ್ರೆಸ್ ರಾಜ್ಯದ ಬೊಕ್ಕಸವನ್ನೇ ಖಾಲಿ ಮಾಡಿದ್ದು, ಮತ್ತೊಂದೆಡೆ ಬಡವರ ಹಕ್ಕುಗಳನ್ನು ನಿರ್ಲಕ್ಷಿಸಿ ತಮ್ಮ ಖಜಾನೆ ತುಂಬಿಸಿಕೊಂಡಿದೆ. ಇದು ಹಗಲು ದರೋಡೆಯಾಗಿದ್ದು, ಇನ್ನು ಮುಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯ ಪ್ರಭಾವ ಬೀರಿ ನುಣುಚಿಕೊಳ್ಳಲು ಸಾಧ್ಯವಿಲ್ಲ."
"ಪ್ರಜಾಪ್ರಭುತ್ವದ ಮೇಲೆ ಜನತೆಗಿರುವ ನಂಬಿಕೆ ಉಳಿಸಲು, ಸಿದ್ದರಾಮಯ್ಯ ಅವರು ಈ ಕೂಡಲೇ ಸಿಎಂ ಸ್ಥಾನ ತ್ಯಜಿಸುವ ಸಮಯ ಬಂದಿದ್ದು, ತಮ್ಮ ವಿರುದ್ದ ಕೇಳಿಬಂದಿರುವ ಎಲ್ಲಾ ಆರೋಪಗಳಿಗೆ ಜನತೆ ಮುಂದೆ ಉತ್ತರಿಸಲಿ" ಎಂದು ಸಂಸದ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
Mp Brijesh Chowta slams CM Siddaramaiah, says he must resign in Muda case. Karnataka Chief Minister Siddaramaiah faces a big challenge as the Governor has sanctioned his prosecution over alleged irregularities in the site allotment by the Mysuru Urban Development Authority (MUDA).
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm