ಬ್ರೇಕಿಂಗ್ ನ್ಯೂಸ್
07-08-20 07:03 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 7: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು - ಬೆಂಗಳೂರು ಸಂಚಾರದ ರೈಲ್ವೇ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದೆ.
ಹಾಸನ - ಮಂಗಳೂರು ವಿಭಾಗದ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಧ್ಯದ ಹಲವು ಕಡೆ ಭೂಕುಸಿತಗಳಾಗಿವೆ. ದೋಣಿಗಲ್ ಮತ್ತು ಕಡಗರವಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದು ಅಲ್ಲಿಂದ ಹರಿದು ಬರುವ ಕೆಸರು ನೀರು ಕಡಗರವಳ್ಳಿ ಮೂಲಕ ಹಾದು ಹೋಗುವ ರೈಲ್ವೇ ಹಳಿಗೆ ಬೀಳುತ್ತಿದೆ. ಇದರಿಂದಾಗಿ ರೈಲು ಹಳಿಯ ಉದ್ದಕ್ಕೂ ಒಂದು ಪಾರ್ಶ್ವ ಕುಸಿದಿದೆ. ಎರಡು ಕಡೆ 15 ಮೀಟರ್ ಉದ್ದಕ್ಕೆ ಕುಸಿದು ನಿಂತಿದ್ದು ಅಪಾಯಕ್ಕೀಡಾಗಿದೆ. ಈ ಭಾಗದಲ್ಲಿ ಹಳಿಯ ಅಡಿ ಭಾಗದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದೆ. ಸಕಲೇಶಪುರದಿಂದ ಆಗಮಿಸಿದ ತಂತ್ರಜ್ಞರು ಕುಸಿತದ ಅಪಾಯ ಇರುವಲ್ಲಿ ಕಲ್ಲು ಮತ್ತು ಹೊಯಿಗೆ ಚೀಲಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದಿಂದ ಗೂಡ್ಸ್ ರೈಲಿನಲ್ಲಿ ಮರಳು ಚೀಲ ಮತ್ತು ಸಲಕರಣೆಗಳನ್ನು ತರಲಾಗಿದ್ದು ಮಣ್ಣು ಬಿದ್ದಿರುವ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.

ಲಾಕ್ ಡೌನ್ ಕಾರಣ ಸ್ಥಗಿತಗೊಂಡ ಮಂಗಳೂರು - ಬೆಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ಪ್ಯಾಸೆಂಜರ್ ರೈಲಿಗೆ ಸದ್ಯಕ್ಕೆ ಅಪಾಯ ಇಲ್ಲ. ಕಳೆದ ವರ್ಷವೂ ಇದೇ ರೀತಿ ಹಾಸನ - ಮಂಗಳೂರು ರೈಲು ಹಳಿ ಈ ಭಾಗದಲ್ಲಿ ಕುಸಿದು ಬಿದ್ದಿತ್ತು. ಗುಡ್ಡ ಕುಸಿದು ರೈಲು ಸಂಚಾರ ವ್ಯತ್ಯಯವಾಗಿತ್ತು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm