ಬ್ರೇಕಿಂಗ್ ನ್ಯೂಸ್
07-08-20 07:03 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 7: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು - ಬೆಂಗಳೂರು ಸಂಚಾರದ ರೈಲ್ವೇ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದೆ.
ಹಾಸನ - ಮಂಗಳೂರು ವಿಭಾಗದ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಧ್ಯದ ಹಲವು ಕಡೆ ಭೂಕುಸಿತಗಳಾಗಿವೆ. ದೋಣಿಗಲ್ ಮತ್ತು ಕಡಗರವಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದು ಅಲ್ಲಿಂದ ಹರಿದು ಬರುವ ಕೆಸರು ನೀರು ಕಡಗರವಳ್ಳಿ ಮೂಲಕ ಹಾದು ಹೋಗುವ ರೈಲ್ವೇ ಹಳಿಗೆ ಬೀಳುತ್ತಿದೆ. ಇದರಿಂದಾಗಿ ರೈಲು ಹಳಿಯ ಉದ್ದಕ್ಕೂ ಒಂದು ಪಾರ್ಶ್ವ ಕುಸಿದಿದೆ. ಎರಡು ಕಡೆ 15 ಮೀಟರ್ ಉದ್ದಕ್ಕೆ ಕುಸಿದು ನಿಂತಿದ್ದು ಅಪಾಯಕ್ಕೀಡಾಗಿದೆ. ಈ ಭಾಗದಲ್ಲಿ ಹಳಿಯ ಅಡಿ ಭಾಗದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದೆ. ಸಕಲೇಶಪುರದಿಂದ ಆಗಮಿಸಿದ ತಂತ್ರಜ್ಞರು ಕುಸಿತದ ಅಪಾಯ ಇರುವಲ್ಲಿ ಕಲ್ಲು ಮತ್ತು ಹೊಯಿಗೆ ಚೀಲಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದಿಂದ ಗೂಡ್ಸ್ ರೈಲಿನಲ್ಲಿ ಮರಳು ಚೀಲ ಮತ್ತು ಸಲಕರಣೆಗಳನ್ನು ತರಲಾಗಿದ್ದು ಮಣ್ಣು ಬಿದ್ದಿರುವ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.

ಲಾಕ್ ಡೌನ್ ಕಾರಣ ಸ್ಥಗಿತಗೊಂಡ ಮಂಗಳೂರು - ಬೆಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ಪ್ಯಾಸೆಂಜರ್ ರೈಲಿಗೆ ಸದ್ಯಕ್ಕೆ ಅಪಾಯ ಇಲ್ಲ. ಕಳೆದ ವರ್ಷವೂ ಇದೇ ರೀತಿ ಹಾಸನ - ಮಂಗಳೂರು ರೈಲು ಹಳಿ ಈ ಭಾಗದಲ್ಲಿ ಕುಸಿದು ಬಿದ್ದಿತ್ತು. ಗುಡ್ಡ ಕುಸಿದು ರೈಲು ಸಂಚಾರ ವ್ಯತ್ಯಯವಾಗಿತ್ತು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm