ಬ್ರೇಕಿಂಗ್ ನ್ಯೂಸ್
07-08-20 07:03 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 7: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು - ಬೆಂಗಳೂರು ಸಂಚಾರದ ರೈಲ್ವೇ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದೆ.
ಹಾಸನ - ಮಂಗಳೂರು ವಿಭಾಗದ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಧ್ಯದ ಹಲವು ಕಡೆ ಭೂಕುಸಿತಗಳಾಗಿವೆ. ದೋಣಿಗಲ್ ಮತ್ತು ಕಡಗರವಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದು ಅಲ್ಲಿಂದ ಹರಿದು ಬರುವ ಕೆಸರು ನೀರು ಕಡಗರವಳ್ಳಿ ಮೂಲಕ ಹಾದು ಹೋಗುವ ರೈಲ್ವೇ ಹಳಿಗೆ ಬೀಳುತ್ತಿದೆ. ಇದರಿಂದಾಗಿ ರೈಲು ಹಳಿಯ ಉದ್ದಕ್ಕೂ ಒಂದು ಪಾರ್ಶ್ವ ಕುಸಿದಿದೆ. ಎರಡು ಕಡೆ 15 ಮೀಟರ್ ಉದ್ದಕ್ಕೆ ಕುಸಿದು ನಿಂತಿದ್ದು ಅಪಾಯಕ್ಕೀಡಾಗಿದೆ. ಈ ಭಾಗದಲ್ಲಿ ಹಳಿಯ ಅಡಿ ಭಾಗದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದೆ. ಸಕಲೇಶಪುರದಿಂದ ಆಗಮಿಸಿದ ತಂತ್ರಜ್ಞರು ಕುಸಿತದ ಅಪಾಯ ಇರುವಲ್ಲಿ ಕಲ್ಲು ಮತ್ತು ಹೊಯಿಗೆ ಚೀಲಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದಿಂದ ಗೂಡ್ಸ್ ರೈಲಿನಲ್ಲಿ ಮರಳು ಚೀಲ ಮತ್ತು ಸಲಕರಣೆಗಳನ್ನು ತರಲಾಗಿದ್ದು ಮಣ್ಣು ಬಿದ್ದಿರುವ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.

ಲಾಕ್ ಡೌನ್ ಕಾರಣ ಸ್ಥಗಿತಗೊಂಡ ಮಂಗಳೂರು - ಬೆಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ಪ್ಯಾಸೆಂಜರ್ ರೈಲಿಗೆ ಸದ್ಯಕ್ಕೆ ಅಪಾಯ ಇಲ್ಲ. ಕಳೆದ ವರ್ಷವೂ ಇದೇ ರೀತಿ ಹಾಸನ - ಮಂಗಳೂರು ರೈಲು ಹಳಿ ಈ ಭಾಗದಲ್ಲಿ ಕುಸಿದು ಬಿದ್ದಿತ್ತು. ಗುಡ್ಡ ಕುಸಿದು ರೈಲು ಸಂಚಾರ ವ್ಯತ್ಯಯವಾಗಿತ್ತು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm