ಬ್ರೇಕಿಂಗ್ ನ್ಯೂಸ್
07-08-20 07:03 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 7: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು - ಬೆಂಗಳೂರು ಸಂಚಾರದ ರೈಲ್ವೇ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದೆ.
ಹಾಸನ - ಮಂಗಳೂರು ವಿಭಾಗದ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಧ್ಯದ ಹಲವು ಕಡೆ ಭೂಕುಸಿತಗಳಾಗಿವೆ. ದೋಣಿಗಲ್ ಮತ್ತು ಕಡಗರವಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದು ಅಲ್ಲಿಂದ ಹರಿದು ಬರುವ ಕೆಸರು ನೀರು ಕಡಗರವಳ್ಳಿ ಮೂಲಕ ಹಾದು ಹೋಗುವ ರೈಲ್ವೇ ಹಳಿಗೆ ಬೀಳುತ್ತಿದೆ. ಇದರಿಂದಾಗಿ ರೈಲು ಹಳಿಯ ಉದ್ದಕ್ಕೂ ಒಂದು ಪಾರ್ಶ್ವ ಕುಸಿದಿದೆ. ಎರಡು ಕಡೆ 15 ಮೀಟರ್ ಉದ್ದಕ್ಕೆ ಕುಸಿದು ನಿಂತಿದ್ದು ಅಪಾಯಕ್ಕೀಡಾಗಿದೆ. ಈ ಭಾಗದಲ್ಲಿ ಹಳಿಯ ಅಡಿ ಭಾಗದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದೆ. ಸಕಲೇಶಪುರದಿಂದ ಆಗಮಿಸಿದ ತಂತ್ರಜ್ಞರು ಕುಸಿತದ ಅಪಾಯ ಇರುವಲ್ಲಿ ಕಲ್ಲು ಮತ್ತು ಹೊಯಿಗೆ ಚೀಲಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದಿಂದ ಗೂಡ್ಸ್ ರೈಲಿನಲ್ಲಿ ಮರಳು ಚೀಲ ಮತ್ತು ಸಲಕರಣೆಗಳನ್ನು ತರಲಾಗಿದ್ದು ಮಣ್ಣು ಬಿದ್ದಿರುವ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.

ಲಾಕ್ ಡೌನ್ ಕಾರಣ ಸ್ಥಗಿತಗೊಂಡ ಮಂಗಳೂರು - ಬೆಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ಪ್ಯಾಸೆಂಜರ್ ರೈಲಿಗೆ ಸದ್ಯಕ್ಕೆ ಅಪಾಯ ಇಲ್ಲ. ಕಳೆದ ವರ್ಷವೂ ಇದೇ ರೀತಿ ಹಾಸನ - ಮಂಗಳೂರು ರೈಲು ಹಳಿ ಈ ಭಾಗದಲ್ಲಿ ಕುಸಿದು ಬಿದ್ದಿತ್ತು. ಗುಡ್ಡ ಕುಸಿದು ರೈಲು ಸಂಚಾರ ವ್ಯತ್ಯಯವಾಗಿತ್ತು.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm