ಬ್ರೇಕಿಂಗ್ ನ್ಯೂಸ್
07-08-20 07:03 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 7: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಿಂದಾಗಿ ಮಂಗಳೂರು - ಬೆಂಗಳೂರು ಸಂಚಾರದ ರೈಲ್ವೇ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದೆ.
ಹಾಸನ - ಮಂಗಳೂರು ವಿಭಾಗದ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಧ್ಯದ ಹಲವು ಕಡೆ ಭೂಕುಸಿತಗಳಾಗಿವೆ. ದೋಣಿಗಲ್ ಮತ್ತು ಕಡಗರವಳ್ಳಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದು ಅಲ್ಲಿಂದ ಹರಿದು ಬರುವ ಕೆಸರು ನೀರು ಕಡಗರವಳ್ಳಿ ಮೂಲಕ ಹಾದು ಹೋಗುವ ರೈಲ್ವೇ ಹಳಿಗೆ ಬೀಳುತ್ತಿದೆ. ಇದರಿಂದಾಗಿ ರೈಲು ಹಳಿಯ ಉದ್ದಕ್ಕೂ ಒಂದು ಪಾರ್ಶ್ವ ಕುಸಿದಿದೆ. ಎರಡು ಕಡೆ 15 ಮೀಟರ್ ಉದ್ದಕ್ಕೆ ಕುಸಿದು ನಿಂತಿದ್ದು ಅಪಾಯಕ್ಕೀಡಾಗಿದೆ. ಈ ಭಾಗದಲ್ಲಿ ಹಳಿಯ ಅಡಿ ಭಾಗದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದೆ. ಸಕಲೇಶಪುರದಿಂದ ಆಗಮಿಸಿದ ತಂತ್ರಜ್ಞರು ಕುಸಿತದ ಅಪಾಯ ಇರುವಲ್ಲಿ ಕಲ್ಲು ಮತ್ತು ಹೊಯಿಗೆ ಚೀಲಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದಿಂದ ಗೂಡ್ಸ್ ರೈಲಿನಲ್ಲಿ ಮರಳು ಚೀಲ ಮತ್ತು ಸಲಕರಣೆಗಳನ್ನು ತರಲಾಗಿದ್ದು ಮಣ್ಣು ಬಿದ್ದಿರುವ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.
ಲಾಕ್ ಡೌನ್ ಕಾರಣ ಸ್ಥಗಿತಗೊಂಡ ಮಂಗಳೂರು - ಬೆಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರ ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ ಪ್ಯಾಸೆಂಜರ್ ರೈಲಿಗೆ ಸದ್ಯಕ್ಕೆ ಅಪಾಯ ಇಲ್ಲ. ಕಳೆದ ವರ್ಷವೂ ಇದೇ ರೀತಿ ಹಾಸನ - ಮಂಗಳೂರು ರೈಲು ಹಳಿ ಈ ಭಾಗದಲ್ಲಿ ಕುಸಿದು ಬಿದ್ದಿತ್ತು. ಗುಡ್ಡ ಕುಸಿದು ರೈಲು ಸಂಚಾರ ವ್ಯತ್ಯಯವಾಗಿತ್ತು.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm