ಬ್ರೇಕಿಂಗ್ ನ್ಯೂಸ್
19-08-24 12:25 pm Udupi Correspondent ಕರಾವಳಿ
Photo credits : Udayavani
ಉಡುಪಿ, ಆಗಸ್ಟ್.18: ಶಿರ್ವ ಶ್ರೀ ಸಿದ್ಧಿವಿನಾಯಕ ದೇಗುಲದ ಸಂಸ್ಥಾಪಕ ಗ್ಯಾಬ್ರಿಯಲ್ ಫೇಬಿಯನ್ ನಜರೆತ್ (80) ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಅವಿವಾಹಿತರಾಗಿದ್ದರು.
ಸಿದ್ಧಿವಿನಾಯಕನ ಪರಮ ಭಕ್ತರಾಗಿದ್ದ ಅವರು ತನ್ನ ಧರ್ಮದ ಜತೆಗೆ ಹಿಂದೂ ಧರ್ಮದ ಬಗ್ಗೆ ಪ್ರೀತಿ, ಕಾಳಜಿ ಹೊಂದಿದ್ದರು. ಮುಂಬೈಯಲ್ಲಿದ್ದ ಉದ್ದಿಮೆಯನ್ನು ಮಾರಾಟ ಮಾಡಿ ಊರಿಗೆ ಬಂದು ನೆಲೆಸಿದ ಬಳಿಕ ಸುಮಾರು 15 ಸೆಂಟ್ಸ್ ಜಾಗದಲ್ಲಿ ಕಟಪಾಡಿ-ಶಿರ್ವ ಮುಖ್ಯರಸ್ತೆಯ ಮಟ್ಟಾರು-ಅಟ್ಟಿಂಜ ಕ್ರಾಸ್ ಬಳಿ 2 ಕೋ.ರೂ ವೆಚ್ಚದಲ್ಲಿ ತನ್ನ ಹೆತ್ತವರ ನೆನಪಿಗಾಗಿ ಶ್ರೀ ಸಿದ್ದಿವಿನಾಯಕನ ದೇಗುಲ ನಿರ್ಮಿಸಿ ಹಿಂದು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದರು.
ಪಲಿಮಾರು ಮಠಾಧೀಶರ ಮಾರ್ಗದರ್ಶನದಲ್ಲಿ 2021ರ ಜು.15ರಂದು ಶ್ರೀ ಸಿದ್ಧಿ ವಿನಾಯಕ ದೇಗುಲ ಲೋಕಾರ್ಪಣೆಗೊಂಡಿತ್ತು. ದೇಗುಲದ ತೃತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಇದೇ ಜುಲೈ 15 ರಂದು ನಡೆದಿದ್ದು ಅದೇ ಸಂದರ್ಭದಲ್ಲಿ ನಜ್ರತ್ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಹಿಂದೆ ಮುಂಬೈಯ ಪ್ರಭಾದೇವಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬಳಿ ವಾಸ್ತವ್ಯವಿದ್ದ ಅವರು ಶ್ರೀ ಸಿದ್ಧಿವಿನಾಯಕನನ್ನ ನೆನೆದು ಸ್ವಪ್ರಯತ್ನದಿಂದ ದೇವಸ್ಥಾನದ ಬಳಿಯೇ ಪ್ಲಾಸ್ಟಿಕ್ ಮತ್ತು ಮೆಟಲ್ ಡೈ ಮೇಕಿಂಗ್ ವರ್ಕ್ ಶಾಪ್ ಸ್ಥಾಪಿಸಿ ಯಶಸ್ಸು ಗಳಿಸಿದ್ದರು. 40 ವರ್ಷಗಳಲ್ಲಿ ಮೂರು ಕಡೆ ಉದ್ದಿಮೆ ಸ್ಥಾಪಿಸಿದ್ದರು. ಕೊನೆಗೆ, ಮುಂಬೈಯ ಉದ್ದಿಮೆಯನ್ನು ಮಾರಾಟ ಮಾಡಿ ಬಂದ ಹಣವನ್ನು ಅಲ್ಲಿನ ಸಿಬಂದಿ ವರ್ಗಕ್ಕೆ ದಾನವಾಗಿ ನೀಡಿದ್ದರು.
ಊರಿಗೆ ಬಂದು ಜಾತಿ ಮತ ಧರ್ಮದ ಭೇದವಿಲ್ಲದೆ ಸುಮಾರು 60 ಮಂದಿಯ ಮದುವೆಗೆ ಧನಸಹಾಯ ಮಾಡಿದ್ದರು. ಅಲ್ಲದೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದರು. ಸರ್ವ ಧರ್ಮೀಯ ಬಡವರ ಸೇವೆಗಾಗಿ ನಿವೇಶನವನ್ನೂ ಕೊಡುಗೆಯಾಗಿ ನೀಡಿದ್ದರು.
ಮೃತರ ಅಂತ್ಯಕ್ರಿಯೆ ಆ.19 ರಂದು ಮಧ್ಯಾಹ್ನ 3 ಗಂಟೆಗೆ ಶಿರ್ವ ಆರೋಗ್ಯ ಮಾತೆಯ ದೇಗುಲದಲ್ಲಿ ನಡೆಯಲಿದೆ. ಮೃತರ ಅಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಬೆಳಗ್ಗೆ 11ರಿಂದ ಸಿದ್ಧಿವಿನಾಯಕ ದೇಗುಲದ ಬಳಿಯ ಅವರ ನಿವಾಸದಲ್ಲಿ ಅವಕಾಶ ಕಲ್ಪಿಸಲಾಗಿದೆ.
Gabriel Fabian Nazareth (80), the founder of Shirva Shri Siddhivinayaka temple, passed away on Sunday, August 18 at a private hospital in Udupi. He was unmarried. The funeral rites will be held on August 19 at 3:00 PM at Shirva Health Mother Church. The public can pay their last respects from 11 AM at his residence near the Shri Siddhivinayak Temple.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm