ಬ್ರೇಕಿಂಗ್ ನ್ಯೂಸ್
20-08-24 06:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿ ನಡುವಿನ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತದ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸಿದೆ. ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆಯ ಬೆಂಬಲವಿದ್ದು ಆಗಸ್ಟ್ 24ರಂದು ನಡೆಯುವ ಪ್ರತಿಭಟನೆಗೆ ಕೈಜೋಡಿಸಲಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಹೆಗ್ಡೆ ಹೇಳಿದರು.
ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಒಳಗಡೆ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿ ರದ್ದಾಗಿದ್ದ ಟೋಲ್ ಅನ್ನು ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ದುರ್ಗಾಪ್ರಸಾದ್ ಹೆಗ್ಡೆ ಮಾತನಾಡಿ, ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಸುದೇಶ್, ಜಯರಾಮ ಶೆಟ್ಟಿ, ಜೀವಂಧರ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Mangalore Canara bus association slams government over setting of another toll plaza after Hejamady.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm