ಬ್ರೇಕಿಂಗ್ ನ್ಯೂಸ್
20-08-24 06:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿ ನಡುವಿನ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತದ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸಿದೆ. ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆಯ ಬೆಂಬಲವಿದ್ದು ಆಗಸ್ಟ್ 24ರಂದು ನಡೆಯುವ ಪ್ರತಿಭಟನೆಗೆ ಕೈಜೋಡಿಸಲಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಹೆಗ್ಡೆ ಹೇಳಿದರು.
ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಒಳಗಡೆ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿ ರದ್ದಾಗಿದ್ದ ಟೋಲ್ ಅನ್ನು ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ದುರ್ಗಾಪ್ರಸಾದ್ ಹೆಗ್ಡೆ ಮಾತನಾಡಿ, ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಸುದೇಶ್, ಜಯರಾಮ ಶೆಟ್ಟಿ, ಜೀವಂಧರ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Mangalore Canara bus association slams government over setting of another toll plaza after Hejamady.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm