ಬ್ರೇಕಿಂಗ್ ನ್ಯೂಸ್
20-08-24 06:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಪಾರದರ್ಶಕ ತನಿಖೆಗೆ ಅನುವಾಗುವಂತೆ ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದರು.
ಈಗಾಗಲೇ ರಾಷ್ಟ್ರಮಟ್ಟದಲ್ಲಿ ಪ್ರಕರಣ ಸದ್ದು ಮಾಡಿದ್ದು ಇಡೀ ದೇಶವೇ ಕರ್ನಾಟಕವನ್ನು ಅನುಮಾನದ ಕಣ್ಣುಗಳಿಂದ ನೋಡುತ್ತಿದೆ. ಈ ಸಂದರ್ಭದಲ್ಲಿ “ನಾನು ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ರಾಜ್ಯಪಾಲರೇ ರಾಜೀನಾಮೆ ನೀಡಲಿ” ಎಂದು ಮೊಂಡುತನ ಪ್ರದರ್ಶಿಸಿದ ಮುಖ್ಯಮಂತ್ರಿಗಳಿಗೆ ಮಂಗಳೂರಿನಲ್ಲಿ ಕಾಂಗ್ರೆಸ್ಸಿನ ಪುಂಡಪೋಕರಿಗಳು ಬಸ್ಸಿಗೆ ಕಲ್ಲು ತೂರಿ ಸಾರ್ವಜನಿಕರಲ್ಲಿ ಭಯಭೀತ ವಾತಾವರಣ ಸೃಷ್ಟಿಸುವ ಮೂಲಕ ಬೆಂಬಲ ನೀಡಿದ್ದಾರೆ. ಕಲ್ಲೆಸೆದ ಕಾಂಗ್ರೆಸ್ಸಿನ ಆರೋಪಿಗಳಿಗೆ ಠಾಣೆಯಲ್ಲಿ ಜಾಮೀನು ನೀಡಿ ಗೌರವದಿಂದ ಬಿಟ್ಟು ಕಳುಹಿಸುವ ಮಟ್ಟಿಗೆ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುವುದು ಜಿಲ್ಲೆಯ ಜನತೆಯ ದೌರ್ಭಾಗ್ಯ. ಈ ಬಗ್ಗೆ ಬಸ್ ಮಾಲಕರ, ಚಾಲಕರು ಕೂಡ ತೀವ್ರ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಾಗಲೀ, ಕಾಂಗ್ರೆಸ್ಸಿನವರಾಗಲೀ ಯಾರೂ ಸಂವಿಧಾನಕ್ಕೆ, ಕಾನೂನಿಗೆ ಅತೀತರಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದರು.

ಬಾಂಗ್ಲಾದಲ್ಲಿ ನಡೆದ ದಂಗೆಯಂತೆ ಮಂಗಳೂರಿನಲ್ಲು ನಡೆಸಿ ರಾಜ್ಯಪಾಲರ ಕಚೇರಿಗೆ ನುಗ್ಗಿ ಅವರನ್ನು ಓಡಿಸುತ್ತೇವೆ ಎಂದಿರುವ ಐವನ್ ಡಿಸೋಜ ಅವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವುದನ್ನು ಬಿಟ್ಟು ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎನ್ನುವ ಪೊಲೀಸರು ಸಿದ್ದರಾಮಯ್ಯ ಬಗ್ಗೆ ಯಾರೋ ಸಾಮಾಜಿಕ ಜಾಲತಾಣದಲ್ಲಿ ಗೀಚಿದ್ದಕ್ಕೆ ಹೇಗೆ ಸುಮೊಟೊ ಕೇಸು ದಾಖಲಿಸಿಕೊಂಡರು? ವಾರ್ಡ್ ಮಟ್ಟದಲ್ಲಿಯೂ ಚುನಾವಣೆಗೆ ನಿಂತು ಗೆಲ್ಲಲಾಗದ ವ್ಯಕ್ತಿಗಳು ಸಿದ್ದರಾಮಯ್ಯನವರಿಗೆ ಬಕೆಟ್ ಹಿಡಿದು ಭಿಕ್ಷೆ ರೂಪದಲ್ಲಿ ಸೀಟು ಗಿಟ್ಟಿಸಿ ಅದರ ಋಣ ಸಂದಾಯಕ್ಕಾಗಿ ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಅಕ್ಷಮ್ಯ. ಕೂಡಲೇ ಭ್ರಷ್ಟಾಚಾರದ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ಇವರ ಮೇಲೆ ದಾಖಲಾಗಬೇಕು ಎಂದು ಶಾಸಕರು ಆಗ್ರಹಿಸಿದರು.
Plan to spoil the name of Mangalore city is done by Congress state government slams MLA Vedavyas kamath.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm