ಬ್ರೇಕಿಂಗ್ ನ್ಯೂಸ್
20-08-24 06:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಪಾರದರ್ಶಕ ತನಿಖೆಗೆ ಅನುವಾಗುವಂತೆ ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದರು.
ಈಗಾಗಲೇ ರಾಷ್ಟ್ರಮಟ್ಟದಲ್ಲಿ ಪ್ರಕರಣ ಸದ್ದು ಮಾಡಿದ್ದು ಇಡೀ ದೇಶವೇ ಕರ್ನಾಟಕವನ್ನು ಅನುಮಾನದ ಕಣ್ಣುಗಳಿಂದ ನೋಡುತ್ತಿದೆ. ಈ ಸಂದರ್ಭದಲ್ಲಿ “ನಾನು ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ರಾಜ್ಯಪಾಲರೇ ರಾಜೀನಾಮೆ ನೀಡಲಿ” ಎಂದು ಮೊಂಡುತನ ಪ್ರದರ್ಶಿಸಿದ ಮುಖ್ಯಮಂತ್ರಿಗಳಿಗೆ ಮಂಗಳೂರಿನಲ್ಲಿ ಕಾಂಗ್ರೆಸ್ಸಿನ ಪುಂಡಪೋಕರಿಗಳು ಬಸ್ಸಿಗೆ ಕಲ್ಲು ತೂರಿ ಸಾರ್ವಜನಿಕರಲ್ಲಿ ಭಯಭೀತ ವಾತಾವರಣ ಸೃಷ್ಟಿಸುವ ಮೂಲಕ ಬೆಂಬಲ ನೀಡಿದ್ದಾರೆ. ಕಲ್ಲೆಸೆದ ಕಾಂಗ್ರೆಸ್ಸಿನ ಆರೋಪಿಗಳಿಗೆ ಠಾಣೆಯಲ್ಲಿ ಜಾಮೀನು ನೀಡಿ ಗೌರವದಿಂದ ಬಿಟ್ಟು ಕಳುಹಿಸುವ ಮಟ್ಟಿಗೆ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುವುದು ಜಿಲ್ಲೆಯ ಜನತೆಯ ದೌರ್ಭಾಗ್ಯ. ಈ ಬಗ್ಗೆ ಬಸ್ ಮಾಲಕರ, ಚಾಲಕರು ಕೂಡ ತೀವ್ರ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಾಗಲೀ, ಕಾಂಗ್ರೆಸ್ಸಿನವರಾಗಲೀ ಯಾರೂ ಸಂವಿಧಾನಕ್ಕೆ, ಕಾನೂನಿಗೆ ಅತೀತರಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದರು.

ಬಾಂಗ್ಲಾದಲ್ಲಿ ನಡೆದ ದಂಗೆಯಂತೆ ಮಂಗಳೂರಿನಲ್ಲು ನಡೆಸಿ ರಾಜ್ಯಪಾಲರ ಕಚೇರಿಗೆ ನುಗ್ಗಿ ಅವರನ್ನು ಓಡಿಸುತ್ತೇವೆ ಎಂದಿರುವ ಐವನ್ ಡಿಸೋಜ ಅವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವುದನ್ನು ಬಿಟ್ಟು ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎನ್ನುವ ಪೊಲೀಸರು ಸಿದ್ದರಾಮಯ್ಯ ಬಗ್ಗೆ ಯಾರೋ ಸಾಮಾಜಿಕ ಜಾಲತಾಣದಲ್ಲಿ ಗೀಚಿದ್ದಕ್ಕೆ ಹೇಗೆ ಸುಮೊಟೊ ಕೇಸು ದಾಖಲಿಸಿಕೊಂಡರು? ವಾರ್ಡ್ ಮಟ್ಟದಲ್ಲಿಯೂ ಚುನಾವಣೆಗೆ ನಿಂತು ಗೆಲ್ಲಲಾಗದ ವ್ಯಕ್ತಿಗಳು ಸಿದ್ದರಾಮಯ್ಯನವರಿಗೆ ಬಕೆಟ್ ಹಿಡಿದು ಭಿಕ್ಷೆ ರೂಪದಲ್ಲಿ ಸೀಟು ಗಿಟ್ಟಿಸಿ ಅದರ ಋಣ ಸಂದಾಯಕ್ಕಾಗಿ ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಅಕ್ಷಮ್ಯ. ಕೂಡಲೇ ಭ್ರಷ್ಟಾಚಾರದ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ಇವರ ಮೇಲೆ ದಾಖಲಾಗಬೇಕು ಎಂದು ಶಾಸಕರು ಆಗ್ರಹಿಸಿದರು.
Plan to spoil the name of Mangalore city is done by Congress state government slams MLA Vedavyas kamath.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:11 pm
HK News Staffer
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am