ಬ್ರೇಕಿಂಗ್ ನ್ಯೂಸ್
20-08-24 10:23 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 20: ಅಪ್ರಾಪ್ತ ಮುಸ್ಲಿಂ ಬಾಲಕಿಯ ಕೈಗೆ ಗೀರಿದ ಘಟನೆ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿತ ಬಾಲಕನ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಾಲಕನು ಪ್ರೀತಿಸುತ್ತಿರುವ ವಿಚಾರದಲ್ಲಿ ಮಾತನಾಡಿದ್ದಾನೆ. ಈ ವೇಳೆ, ಬಾಲಕಿ ವಿರೋಧಿಸಿದ್ದಕ್ಕೆ ತನ್ನ ಕೈಯಲ್ಲಿದ್ದ ಯಾವುದೋ ಹರಿತ ವಸ್ತುವಿನಲ್ಲಿ ತಿವಿದು ಪರಾರಿಯಾಗಿದ್ದಾನೆ. ಗಾಯಗೊಂಡ ಬಾಲಕಿಯು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾಳೆ.


ಆದರೆ, ಮಧ್ಯಾಹ್ನ ವಿಷಯ ತಿಳಿಯುತ್ತಲೇ ಬಾಲಕಿಯ ಮೇಲೆ ಚೂರಿ ಇರಿತವೆಂದು ಸುದ್ದಿ ಹಬ್ಬಿತ್ತು. ಮುಸ್ಲಿಂ ಸಂಘಟನೆ ಯುವಕರು, ಕಾಂಗ್ರೆಸ್ ಮುಖಂಡರು ಸೇರಿದಂತೆ ನೂರಾರು ಮಂದಿ ಸರ್ಕಾರಿ ಆಸ್ಪತ್ರೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಪುತ್ತೂರು ಪೊಲೀಸರು ಬಾಲಕಿಯ ಹೇಳಿಕೆ ಪಡೆದು ತನಿಖೆ ಆರಂಭಿಸಿದ್ದರು. ಮುಸ್ಲಿಂ ಮುಖಂಡರು ಆರೋಪಿತ ಬಾಲಕನ ವಿರುದ್ಧ ಕೊಲೆಯತ್ನ, ಪೋಕ್ಸೋ ಕೇಸು ದಾಖಲಿಸಬೇಕೆಂದು ಹೇಳಿಕೆಯನ್ನು ನೀಡಿ ಪೊಲೀಸರ ಮೇಲೆ ಒತ್ತಡವನ್ನೂ ಹಾಕಿದ್ದರು.
ಬಾಲಕಿ ನೀಡಿದ ಹೇಳಿಕೆಯಂತೆ, ಬೊಳುವಾರಿನಿಂದ ಕಾಲೇಜಿಗೆ ತೆರಳುವ ಹಾದಿಯ ಸಿಸಿಟಿವಿಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಆರೋಪಿತ ಬಾಲಕನನ್ನು ಕರೆದು ವಿಚಾರಣೆ ನಡೆಸಿದ್ದು, ಆತ ತನಗೇನೂ ಗೊತ್ತಿಲ್ಲ ಎಂದಿದ್ದಾನೆಂದು ತಿಳಿದುಬಂದಿದೆ. ಬಾಲಕಿ ಜೊತೆಗಿದ್ದವರ ಹುಡುಗಿಯರನ್ನೂ ವಿಚಾರಣೆ ನಡೆಸಿದ್ದಾರೆ. ಸಂಜೆಯ ವೇಳೆಗೆ ಬಿಜೆಪಿ ಮುಖಂಡ ಅರುಣ್ ಪುತ್ತಿಲ ಮತ್ತು ಇತರರು ಪೊಲೀಸ್ ಠಾಣೆಗೆ ತೆರಳಿ, ಸೂಕ್ತ ತನಿಖೆಗೆ ಆಗ್ರಹ ಮಾಡಿದ್ದಾರೆ. ಆನಂತರ, ಮಾಧ್ಯಮಕ್ಕೆ ಹೇಳಿಕೆ ನೀಡಿದ ಪುತ್ತಿಲ, ಘಟನೆಯ ಬಗ್ಗೆ ಸಂಶಯದ ಮಾತುಗಳನ್ನಾಡಿದ್ದಾರೆ. ಒಟ್ಟು ಘಟನೆ ಕಟ್ಟುಕತೆಯೆಂದು ಆರೋಪಿಸಿದ್ದು, ಪೊಲೀಸರು ಸತ್ಯಾಸತ್ಯತೆ ಅರಿಯಲು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಪೊಲೀಸರು ಆರೋಪಿತ ಬಾಲಕ ಮೈನರ್ ಆಗಿರುವುದರಿಂದ ವಿಚಾರಣೆ ನಡೆಸಿ ಕಳುಹಿಸಿಕೊಟ್ಟಿದ್ದಾರೆ. ಕಾಲೇಜಿನ ಶಿಕ್ಷಕರ ಬಳಿಯೂ ಮಾಹಿತಿ ಕೇಳಿದ್ದಾರೆ. ಬಾಲಕ ಮತ್ತು ಬಾಲಕಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ಅಪ್ರಾಪ್ತರು ಆಗಿದ್ದಾರೆ. ಹೀಗಾಗಿ ಪೊಲೀಸರು ತನಿಖೆ ನಡೆಸುವಾಗಲೂ ಜಾಗ್ರತೆ ವಹಿಸಿದ್ದಾರೆ. ಆದರೆ ಬಾಲಕ, ಬಾಲಕಿಯ ಹೇಳಿಕೆ, ಸಹಪಾಠಿಗಳ ಹೇಳಿಕೆಗಳು ಪೊಲೀಸರಿಗೂ ಗೊಂದಲ ಸೃಷ್ಟಿಸಿದೆ.
Mangalore Puttur attack on girl student, Arun Puthila says its a fake story. A college student in Puttur town allegedly stabbed his college mate and injured her in the hand on Tuesday. The girl was rushed to the government hospital.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm