ಬ್ರೇಕಿಂಗ್ ನ್ಯೂಸ್
20-08-24 11:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 20: ಮೊಬೈಲ್ ಬಳಕೆಯ ಬಗ್ಗೆ ಹೆತ್ತವರು ಗದರಿಸಿದ್ದಕ್ಕೆ ಇಬ್ಬರು ಅಪ್ರಾಪ್ತ ಮಕ್ಕಳು ಸಾವಿಗೆ ಶರಣಾದ ಪ್ರತ್ಯೇಕ ಘಟನೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್ ಬ್ಯಾಗ್ ಸಹಿತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಜಾರ್ಖಂಡ್ ಮೂಲದ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದಾಳೆ.
ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗು ಅಂಜಾರು ಪೊಲೀಸ್ ಕ್ವಾರ್ಟರ್ಸ್ ಬಳಿಯ ನಿವಾಸಿ ಪ್ರಥಮೇಶ್ (17) ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಚಾಳಿ ಕಡಿಮೆ ಮಾಡಲು ಮನೆಯವರು ಮೊಬೈಲ್ ತೆಗೆದಿಟ್ಟಿದ್ದರು. ಕಾಲೇಜಿಗೆಂದು ತೆರಳಿದ್ದ ವಿದ್ಯಾರ್ಥಿ, ಅತ್ತ ಕಾಲೇಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಸೋಮವಾರ ಎಷ್ಟು ಹುಡುಕಿದರೂ ಹುಡುಗ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ಜನವಸತಿ ರಹಿತ ಬಾವಿಯಲ್ಲಿ ಶಾಲಾ ಬ್ಯಾಗ್ ತೇಲುತ್ತಿರುವ ಮಾಹಿತಿ ಲಭಿಸಿತ್ತು. ಪೊಲೀಸರು ಹುಡುಕಾಡಿ ಬಾವಿಯಿಂದ ವಿದ್ಯಾರ್ಥಿಯ ಮೃತದೇಹ ಹೊರ ತೆಗೆದಿದ್ದಾರೆ.
ಮೊಬೈಲ್ ಗೀಳು, ತಾಯಿಗೆ ಗೋಳು
ಮೊಬೈಲ್ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿ ಬಗ್ಗೆ ಮುನಿಸಿಕೊಂಡ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದಲ್ಲಿ ನಡೆದಿದೆ. ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ಬಾಲಕಿ ನೀಲಮ್ ಮೃತಳು. ಜಾರ್ಖಂಡ್ನ ಲಾತೆಹಾರ್ ಜಿಲ್ಲೆ ನಿವಾಸಿ ಸರ್ಜು ಬುಯ್ಯಾನ್ ಎಂಬವರು ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಭಾನುವಾರ ಸಂಜೆ ಮಗಳು ಮೊಬೈಲ್ ವಿಚಾರದಲ್ಲಿ ಸಿಟ್ಟಿಗೆದ್ದು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
Mangalore Udupi Mobile addict, two suicide cases registered over parents shouting over mobile use.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm