ಬ್ರೇಕಿಂಗ್ ನ್ಯೂಸ್
20-08-24 11:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 20: ಮೊಬೈಲ್ ಬಳಕೆಯ ಬಗ್ಗೆ ಹೆತ್ತವರು ಗದರಿಸಿದ್ದಕ್ಕೆ ಇಬ್ಬರು ಅಪ್ರಾಪ್ತ ಮಕ್ಕಳು ಸಾವಿಗೆ ಶರಣಾದ ಪ್ರತ್ಯೇಕ ಘಟನೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್ ಬ್ಯಾಗ್ ಸಹಿತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಜಾರ್ಖಂಡ್ ಮೂಲದ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದಾಳೆ.
ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗು ಅಂಜಾರು ಪೊಲೀಸ್ ಕ್ವಾರ್ಟರ್ಸ್ ಬಳಿಯ ನಿವಾಸಿ ಪ್ರಥಮೇಶ್ (17) ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಚಾಳಿ ಕಡಿಮೆ ಮಾಡಲು ಮನೆಯವರು ಮೊಬೈಲ್ ತೆಗೆದಿಟ್ಟಿದ್ದರು. ಕಾಲೇಜಿಗೆಂದು ತೆರಳಿದ್ದ ವಿದ್ಯಾರ್ಥಿ, ಅತ್ತ ಕಾಲೇಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಸೋಮವಾರ ಎಷ್ಟು ಹುಡುಕಿದರೂ ಹುಡುಗ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ಜನವಸತಿ ರಹಿತ ಬಾವಿಯಲ್ಲಿ ಶಾಲಾ ಬ್ಯಾಗ್ ತೇಲುತ್ತಿರುವ ಮಾಹಿತಿ ಲಭಿಸಿತ್ತು. ಪೊಲೀಸರು ಹುಡುಕಾಡಿ ಬಾವಿಯಿಂದ ವಿದ್ಯಾರ್ಥಿಯ ಮೃತದೇಹ ಹೊರ ತೆಗೆದಿದ್ದಾರೆ.
ಮೊಬೈಲ್ ಗೀಳು, ತಾಯಿಗೆ ಗೋಳು
ಮೊಬೈಲ್ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿ ಬಗ್ಗೆ ಮುನಿಸಿಕೊಂಡ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದಲ್ಲಿ ನಡೆದಿದೆ. ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ಬಾಲಕಿ ನೀಲಮ್ ಮೃತಳು. ಜಾರ್ಖಂಡ್ನ ಲಾತೆಹಾರ್ ಜಿಲ್ಲೆ ನಿವಾಸಿ ಸರ್ಜು ಬುಯ್ಯಾನ್ ಎಂಬವರು ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಭಾನುವಾರ ಸಂಜೆ ಮಗಳು ಮೊಬೈಲ್ ವಿಚಾರದಲ್ಲಿ ಸಿಟ್ಟಿಗೆದ್ದು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ.
Mangalore Udupi Mobile addict, two suicide cases registered over parents shouting over mobile use.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm