ಬ್ರೇಕಿಂಗ್ ನ್ಯೂಸ್
21-08-24 01:28 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.21: ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು- ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿದ್ದ ಮಣ್ಣಿನ ರಾಶಿಯನ್ನು ಸಂಪೂರ್ಣ ತೆರವುಗೊಳಿಸಿದ್ದು, ಇದರ ಬೆನ್ನಲ್ಲೇ ರೈಲು ಸಂಚಾರ ಎಂದಿನಂತೆ ಆರಂಭಗೊಂಡಿದೆ.
ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ಸೋಮವಾರ ರಾತ್ರಿಯೇ ರೈಲು ಸಂಚಾರ ಆರಂಭಗೊಂಡಿತ್ತು. ರೈಲು ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳವಾರ ಸಂಚರಿಸಬೇಕಿದ್ದ ಮಂಗಳೂರು ಸೆಂಟ್ರಲ್- ವಿಜಯಪುರ ಎಕ್ಸ್ ಪ್ರೆಸ್ ರೈಲು ಮಾತ್ರ ರದ್ದಾಗಿದ್ದು, ಉಳಿದ ಎಲ್ಲಾ ರೈಲುಗಳು ನಿಗದಿತ ಸಮಯದ ಪ್ರಕಾರ ಸಂಚರಿಸಿದೆ. ಮಣ್ಣು ಕುಸಿತಗೊಂಡ ಸ್ಥಳದಲ್ಲಿ ರೈಲು ಸಂಚಾರದ ವೇಗಕ್ಕೆ ಮಿತಿ ಹೇರಲಾಗಿದೆ. ಗುಡ್ಡದ ಭಾಗದಿಂದಲೇ ಮಣ್ಣನ್ನು ತೆರವುಗೊಳಿಸುವ ಮೂಲಕ ಸಂಚಾರಕ್ಕೆ ಮಾರ್ಗವನ್ನು ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ವಾರದ ಹಿಂದೆ ಗುಡ್ಡ ಕುಸಿದಿದ್ದ ಜಾಗದಲ್ಲಿ ಶುಕ್ರವಾರ ಮತ್ತೆ ಮಣ್ಣು ಕುಸಿದಿತ್ತು. ಇದರಿಂದ ರೈಲು ಸಂಚಾರವನ್ನು ಮತ್ತೆ ಮೂರು ದಿನ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳ ಬಳಿಕ ಮಂಗಳೂರು - ಬೆಂಗಳೂರು ರೈಲು ಸೇವೆಗಳು ಪ್ರಾರಂಭಗೊಂಡಿವೆ. ಈ ಬಾರಿ ಜುಲೈ - ಆಗಸ್ಟ್ ಒಂದು ತಿಂಗಳ ಅಂತರದಲ್ಲಿ ಸಕಲೇಶಪುರ ಆಸುಪಾಸಿನಲ್ಲಿ ನಾಲ್ಕು ಕಡೆ ಗುಡ್ಡ ಕುಸಿತ ಆಗಿದ್ದು ರೈಲು ಸಂಚಾರಕ್ಕೆ ತೊಡಕಾಗಿತ್ತು.
Train services resume after landslide cleared in Bangalore Mangalore route. Landslides on the railway track between Ballupete and Sakleshpur stations had caused significant disruptions to two trains operating on the Bengaluru-Mangaluru route. The Yeshwantpur-Karwar train faced partial cancellation between Hassan and Karwar, while the Mangaluru Junction-Yeshwantpur train was compelled to terminate at Sakleshpur due to the landslide.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:11 pm
HK News Staffer
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am