ಬ್ರೇಕಿಂಗ್ ನ್ಯೂಸ್
21-08-24 09:44 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮೂರ್ಛೆಯಿಂದ ಎದ್ದು ಕೂತಿದೆ. ಐವನ್ ರನ್ನು ಹೀಯಾಳಿಸುವ ನೆಪದಲ್ಲಿ ನಿದ್ದೆಯಿಂದ ಎದ್ದು ಕುಳಿತಿದ್ದು ಖುಷಿ ಕೊಟ್ಟಿದೆ. ಆದರೆ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಸಂದರ್ಭದಲ್ಲಿ ನಿಮ್ಮ ಮೋರ್ಚಾ ಎಲ್ಲಿತ್ತು. ವ್ಯಾಪಾರ ನಿಷೇಧ ಮಾಡಿದಾಗ, ಕೊಲೆಗಳಾದಾಗ ನೀವು ಎಲ್ಲಿದ್ದಿರಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ತಿರುಗೇಟು ನೀಡಿದ್ದಾರೆ.
ಬಾಂಗ್ಲಾ ಪರ ಹೇಳಿಕೆ ನೀಡಿದ ಐವನ್ ಡಿಸೋಜ ಹಿಂಬಾಗಿಲಲ್ಲಿ ಬಂದವರು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕರು ಹೇಳಿರುವ ಮಾತಿಗೆ ತಿರುಗೇಟು ನೀಡಲು ಸುದ್ದಿಗೋಷ್ಟಿ ನಡೆಸಿದ ಶಾಹುಲ್ ಹಮೀದ್, ಎರಡು ವರ್ಷ ಹಿಂದೆ ಫಾಜಿಲ್ ಎಂಬ ಯುವಕ ರಸ್ತೆ ಬದಿ ನಿಂತಿದ್ದಾಗ ಕೊಂದು ಹಾಕಿದ್ರಲ್ಲಾ, ಆಗ ನೀವು ಎಲ್ಲಿದ್ದಿರಿ. ಸಿಟಿ ರವಿ, ಶೋಭಾ ಕರಂದ್ಲಾಜೆ ಮಸೀದಿ ಬಗ್ಗೆ ಹೇಳಿಕೆ ಕೊಟ್ಟಾಗ ನೀವು ಎಲ್ಲಿದ್ದಿರಿ. ಬೆಳ್ತಂಗಡಿ ಶಾಸಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಹಿಂದುಗಳು ಹೋಗಬಾರದು ಎಂದಾಗ ನೀವು ಮಾತಾಡಿಲ್ಲ ಯಾಕೆ. ಇಡೀ ರಾಜ್ಯದಲ್ಲಿ ಒಂದು ಸೀಟು ಪಡೆಯಲು ಆಗದ ನಿಮಗೆ ಮಾನ ಮರ್ಯಾದೆ ಇದೆಯಾ.. ಎಂಎಲ್ಸಿ ಬಿಡಿ, ಒಂದು ಮೇಯರ್, ಜಿಪಂ ಸ್ಥಾನ ತೆಗೆಸುವುದಕ್ಕಾದರೂ ಆಗಿದೆಯಾ.. ಯಾಕೆ ನೀವು ಬಕೆಟ್ ಹಿಡಿಯುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.
ಐವಾನ್ ಡಿಸೋಜ ಎರಡನೇ ಬಾರಿ ಪರಿಷತ್ ಸದಸ್ಯರಾಗಿದ್ದಾರೆ. ನಿಮ್ಮ ಪ್ರತಾಪಸಿಂಹ ನಾಯಕ್, ಸಿಟಿ ರವಿ ಸೋತು ಸುಣ್ಣವಾದ ಬಳಿಕ ಹಿಂಬಾಗಿಲಲ್ಲಿ ಹೋಗಿದ್ದಲ್ವಾ. ನಿಮಗೆ ಹಿಂಬಾಗಿಲು ಬಿಡಿ ಶೌಚಾಲಯದ ಬಾಗಿಲೂ ಸಿಗಲ್ಲ. ಐವಾನ್ ಡಿಸೋಜ ಶ್ರಮಿಕ ವರ್ಗದ ನಾಯಕ. ಗ್ರಾಪಂ ಸ್ತರದಿಂದ ಮೇಲೆ ಬಂದವರು. ಎರಡು ಬಾರಿ ಅಸೆಂಬ್ಲಿಗೆ ಸ್ಪರ್ಧಿಸಿದ್ದಾರೆ. ಹೀಯಾಳಿಸುವ ಬದಲು ಮೋರ್ಚಾ ಬರ್ಖಾಸ್ತು ಮಾಡಿ ಹೊರಬನ್ನಿ ಎಂದರು. ಬಾಂಗ್ಲಾದಲ್ಲಿ ಸರ್ವಾಧಿಕಾರ, ಭ್ರಷ್ಟಾಚಾರ ಮೇಳೈಸಿತ್ತು. ಅಧಿಕಾರ ದುರುಪಯೋಗ ತಾಳಲಾರದೆ ಜನರು ದಂಗೆ ಎದ್ದಿದ್ದಾರೆ. ಅದೇ ರೀತಿ ನಮ್ಮಲ್ಲೂ ಆದರೆ ಜನರು ದಂಗೆ ಏಳಬಹುದು ಅಂತ ಐವಾನ್ ಡಿಸೋಜ ಹೇಳಿದ್ದಾರೆ ಎಂದಷ್ಟೇ ಪ್ರಶ್ನಿಸಿದ್ದಾರೆ. ಆಲ್ವಿನ್ ಪ್ರಕಾಶ್, ಇಬ್ರಾಹಿಂ ಕೋಡಿಜಾಲ್, ಸಬಿತಾ ಮಿಸ್ಕಿತ್, ಫಯಾಜ್, ನಜೀರ್ ಬಜಾಲ್, ಶಬೀರ್ ಸಿದ್ದಕಟ್ಟೆ ಮತ್ತಿತರರಿದ್ದರು.
Ivan dsouza remarks, congress Shahul Ahmeed slams BJP Morcha in Mangalore
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm