ಬ್ರೇಕಿಂಗ್ ನ್ಯೂಸ್
23-08-24 05:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.23: ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಿದ್ದ ಟೋಲ್ ಸಂಗ್ರಹ ಕೇಂದ್ರಕ್ಕೆ ನೀಡಲಾದ ಕಾರ್ಯಾದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಟೋಲ್ ಕೇಂದ್ರ ಆರಂಭಿಸದಿರಲು ತೀರ್ಮಾನಿಸಿದೆ.
ಟೋಲ್ ಕೇಂದ್ರ ಸ್ಥಾಪನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಆಗಸ್ಟ್ 22ರಂದು ಉಡುಪಿ ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದರು. ಮರುದಿನ, ಆಗಸ್ಟ್ 23ರಂದು ಜನವಿರೋಧ ಪರಿಗಣಿಸಿ ಕಾರ್ಯಾದೇಶ ಹಿಂಪಡೆಯುವುದಾಗಿ ಆದೇಶ ಹೊರಡಿಸಿದ್ದಾರೆ.

ಕಾರ್ಕಳ - ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಕೇಂದ್ರ ಆರಂಭಿಸುವುದನ್ನು ವಿರೋಧಿಸಿ ಆಗಸ್ಟ್ 24ರಂದು ರಸ್ತೆ ತಡೆದು ಪಕ್ಷಾತೀತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೂ ಮನವರಿಕೆ ಮಾಡಲಾಗಿತ್ತು. ಖಾಸಗಿ ಬಸ್ ಮಾಲಕರು ಸೇರಿದಂತೆ ಎಲ್ಲ ವಿಭಾಗದಿಂದ ವಿರೋಧ ವ್ಯಕ್ತವಾಗಿತ್ತು. ಇದಲ್ಲದೆ, ಕಂಚಿನಡ್ಕದಿಂದ 7.50 ಕಿಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಜಮಾಡಿ ಟೋಲ್ ಇರುವುದರಿಂದ ಹೊಸ ಟೋಲ್ ಕೇಂದ್ರ ಸ್ಥಾಪಿಸಿದರೆ ಜನರಿಗೆ ಹೊರೆಯಾಗುತ್ತದೆ ಎಂಬ ಬಗ್ಗೆ ಸಚಿವರ ಗಮನಕ್ಕೆ ತರಲಾಗಿತ್ತು.
ಟೋಲ್ ಕೇಂದ್ರ ಸ್ಥಾಪನೆಗಾಗಿ ಭಾರತೀ ಕನ್ಸ್ ಟ್ರಕ್ಷನ್ ಕಂಪನಿಗೆ ಕೆಆರ್ ಡಿಸಿಎಲ್ ಮೂಲಕ ಕಾರ್ಯಾದೇಶ ನೀಡಲಾಗಿತ್ತು. ಆದರೆ ಸ್ಥಳದಲ್ಲಿ ಸರ್ವಿಸ್ ರಸ್ತೆಯಾಗಲೀ, ಶೌಚಾಲಯ ಇನ್ನಿತರ ವ್ಯವಸ್ಥೆಗಳನ್ನು ಮಾಡದೇ ಇರುವುದರಿಂದ ಸದ್ಯಕ್ಕೆ ಕಾರ್ಯಾದೇಶ ಹಿಂಪಡೆಯುವುದಾಗಿ ತನ್ನ ಆದೇಶ ಪತ್ರದಲ್ಲಿ ಸಚಿವ ಜಾರಕಿಹೊಳಿ ತಿಳಿಸಿದ್ದಾರೆ.
Padubidri Karkala Proposed Kanchinadkka toll gate temporarily cancelled after action Committee planned to hold protest. Kanchinadkka Toll Gate Virodhi Horata Samithi has planned to stage a protest against the government’s move to open a toll gate on the Padubidri-Karkala State Highway at Kanchinadkka in Udupi district on Saturday, August 24, according to its president Suhas Hegde Nandalike.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm