ಬ್ರೇಕಿಂಗ್ ನ್ಯೂಸ್
28-08-24 02:50 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ 'ಅಲೋಶಿಯಸ್ ಫೆಸ್ಟ್ 2024' ಆಗಸ್ಟ್ 31 ರಂದು ಕಾಲೇಜು ಆವರಣದ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ನಡೆಯಲಿದೆ ಎಂದು ವಿವಿಯ ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಸಹ ಆಯೋಜಕಿ ಭವ್ಯಾ ಶೆಟ್ಟಿ, ಕಾಲೇಜಿನ ಹಳೆ ವಿದ್ಯಾರ್ಥಿ ಕೆಂಡಸಂಪಿಗೆ ಖ್ಯಾತಿಯ ನಟಿ ಮಾನ್ವಿತಾ ಕಾಮತ್ ಅವರು ಉತ್ಸವದ ಉದ್ಘಾಟನೆಯನ್ನು ನಡೆಸಲಿದ್ದಾರೆ. ಗೌರವ ಅತಿಥಿಯಾಗಿ ಲೇಖಕಿ ಸೆರಾ ಫೆಲೆಕ್ಸ್ ಆಗಮಿಸಲಿದ್ದು ಅವರು ಬರೆದಿರುವ 'ಎ ಕ್ರೈ ಹರ್ಡ್ ಏಸ್ ಎ ಸಾಂಗ್' ಎನ್ನುವ ಪುಸ್ತಕ ಈ ವೇಳೆ ಬಿಡುಗಡೆಗೊಳ್ಳಲಿದೆ. ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ವರಿಷ್ಠಾಧಿಕಾರಿ ವಂ.ಮೆಲ್ವಿನ್ ಜೋಸೆಫ್ ಪಿಂಟೋ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಉತ್ಸವವನ್ನು 'ಹಬ್ಬಗಳ ಹಬ್ಬ' ಹಾಗೂ 'ಸಾಂಸ್ಕೃತಿಕ ಹಬ್ಬ' ಎಂಬ ಎರಡು ವಿಭಾಗಗಳಲ್ಲಿ ಆಯೋಜಿಸಲಾಗುವುದು. 'ಹಬ್ಬಗಳ ಹಬ್ಬ'ದಲ್ಲಿ ಒಟ್ಟು 31 ಶೈಕ್ಷಣಿಕ ಸ್ಪರ್ಧೆಗಳನ್ನು ಕಲಾ, ವಾಣಿಜ್ಯ, ವಿಜ್ಞಾನ, ಬಿಸಿಎ, ಬಿಬಿಎ, ಬಿವೋಕ್ ಹಾಗೂ ವಿಜ್ಞಾನ ಪ್ರದರ್ಶನಗಳು ಹಾಗೂ ಸಾಂಸ್ಕೃತಿಕ ಹಬ್ಬಗಳಲ್ಲಿ ಶಾಸ್ತ್ರೀಯ ನೃತ್ಯ ಫೇಸ್ ಪೈಂಟಿಂಗ್, ಮೆಹಂದಿ, ಕಸದಿಂದ ರಸ್ತೆ ಹಾಗೂ ವೈವಿದ್ಯಮ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಅದ್ವಿಕಾ ಶೆಟ್ಟಿ ಮಾತನಾಡಿ ”ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆಯ ವಿದ್ಯಾರ್ಥಿ ಉದ್ಯಮಿ
ಕನ್ಯಾನ ಸದಾಶಿವ ಶೆಟ್ಟಿ ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಅಲೋಶಿಯಸ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರವೀಣ್ ಮಾರ್ಟಿಸ್ ಎಸ್.ಜೆ ಅವರು ವಹಿಸಲಿದ್ದಾರೆ. ವಿವಿಧ ಕಾಲೇಜುಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಮಾರು 37 ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಉಪಕುಲಪತಿ ಡಾ.ರೇಜಿ ಜಾನ್, ವ್ಯಾನ್ಸ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
Mangalore Aloysius College to hold Aloysius Fest 2024 on August 31st. Aloysius Fest 2024 will be divided into two main categories: 'Festival of Festivals' and 'Cultural Festival'.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm