ಬ್ರೇಕಿಂಗ್ ನ್ಯೂಸ್
28-08-24 05:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ದಿನೇಶ್ ಕುಡ್ತಮೊಗರು (20) ಮತ್ತು ಬೋಳಂತೂರು ನಿವಾಸಿ ಭರತ್ ಅಲಿಯಾಸ್ ಯಕ್ಷಿತ್ (24) ಬಂಧಿತ ಆರೋಪಿಗಳು. ಇಬ್ಬರೂ ಬಜರಂಗದಳ ಕಾರ್ಯಕರ್ತರೆಂದು ತಿಳಿದುಬಂದಿದೆ. ದಿನೇಶ್ ಚಾಲಕನಾಗಿ ಕೆಲಸ ಮಾಡುತ್ತಿದ್ದು ಈ ಹಿಂದೆ ಮೂರು ಹಲ್ಲೆ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಭರತ್ ಕನ್ಯಾನದಲ್ಲಿ ಫೈನಾನ್ಸ್ ಕಲೆಕ್ಷನ್ ಮಾಡುವ ಕೆಲಸ ಮಾಡುತ್ತಿದ್ದು ಈ ಹಿಂದೆ ಒಂದು ಪ್ರಕರಣ ಇದೆ. ಆರೋಪಿಗಳು ಮಂಗಳೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ, ಐವಾನ್ ವಿರುದ್ಧದ ಸಿಟ್ಟಿನಲ್ಲಿ ಕಲ್ಲು ಎಸೆದಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.
ಐವನ್ ಮನೆಯ ಪರಿಸರದ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ರಾಜ್ಯಪಾಲರನ್ನು ಬಾಂಗ್ಲಾಕ್ಕೆ ಹೋಲಿಸಿ ಹೇಳಿಕೆ ನೀಡಿದ್ದಕ್ಕಾಗಿ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಇದರ ನಡುವೆ, ಆಗಸ್ಟ್ 20 ರ ತಡರಾತ್ರಿ ಐವನ್ ಡಿಸೋಜಾ ಅವರ ಮಂಗಳೂರು ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಮನೆಯ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು ಎನ್ನಲಾಗಿತ್ತು. ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪಾಂಡೇಶ್ವರ ಠಾಣೆ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.
Stone pelting on Congress Ivan Dsouza house, two members of Bajrang dal arrested from bantwal. The accused have been identified as Bharat alias Yakshith (24) from Bolantoor Village, Bantwal Taluk and Dinesh Kurthamogeru (20) from Kolnadu Village, Bantwal Taluk.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm