ಬ್ರೇಕಿಂಗ್ ನ್ಯೂಸ್
29-08-24 10:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಇಲೆಕ್ಟ್ರಿಕ್ ಆಟೋ ಚಾಲಕರಿಗೆ ಜಿಲ್ಲೆಯಾದ್ಯಂತ ಸಂಚಾರಕ್ಕೆ ಅವಕಾಶ ನೀಡಿರುವುದನ್ನು ವಿರೋಧಿಸಿ ಸಿಎನ್ ಜಿ, ಪೆಟ್ರೋಲ್ ಬಳಕೆಯ ಆಟೋ ಚಾಲಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ ನೀಡಿದ್ದು, ಇ-ಆಟೋ ಓಡಾಟಕ್ಕೆ ಸಂಬಂಧಿಸಿ ಕೇಂದ್ರದ ಮಾರ್ಗಸೂಚಿ ಪ್ರಕಾರವೇ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೋಟಾರು ವಾಹನ ಕಾಯಿದೆ 66 ಪ್ರಕಾರ ಎಲ್ಪಿಜಿ ಮತ್ತು ಸಿಎನ್ಜಿ ವಾಹನಗಳಿಗೆ ಪರವಾನಗಿ ನೀಡಲಾಗಿದೆ. ಆಟೋ ರಿಕ್ಷಾಗಳ ಪರವಾನಗಿ ಅನುಮತಿ ಆಧಾರದಲ್ಲಿ ವಲಯ-1, 2 ಎಂದು ವಿಂಗಡಣೆ ಮಾಡಲಾಗಿತ್ತು. ಆದರೆ ಇತ್ತೀಚೆಗೆ ಚಾಲ್ತಿಗೆ ಬಂದ ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ಕೇಂದ್ರ ಸರಕಾರವೇ ಸೆಕ್ಷನ್ 66ರಿಂದ ವಿನಾಯಿತಿ ನೀಡಿದೆ. ಇದರಿಂದ ಸಿಎನ್ಜಿ ಮತ್ತು ಎಲ್ಪಿಜಿ ಆಟೋ ಚಾಲಕರು ಅಸಮಾಧಾನಗೊಂಡಿದ್ದಾರೆ. ಆದರೆ, ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನಷ್ಟೇ ಪಾಲನೆ ಮಾಡಿದ್ದೇವೆ ಎಂದರು.
ಈ ಬಗ್ಗೆ ಈಗಾಗಲೇ ಆಟೋ ಚಾಲಕರು ಮತ್ತು ಅವರ ವಕೀಲರು ವಿಚಾರ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಮೋಟಾರು ವಾಹನ ನೀತಿಯಂತೆ, ಮಂಗಳೂರು ನಗರ ಪೊಲೀಸರು, ಮಹಾನಗರ ಪಾಲಿಕೆಯಿಂದ ರಸ್ತೆಯ ಒತ್ತಡ, ಪಾರ್ಕಿಂಗ್ ವ್ಯವಸ್ಥೆಯ ಮಾಹಿತಿ ಪಡೆದು ಇ-ಆಟೋಗಳಿಗೆ ಅನುಮತಿ ನೀಡಲಾಗಿದೆ. ಎಲ್ಲವೂ ಕಾನೂನು ಪ್ರಕಾರವೇ ನಡೆದಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪ ಇಲ್ಲ. ಹೈಕೋರ್ಟ್ ಆದೇಶವನ್ನು ಗಮನಿಸಿಯೇ ಆದೇಶ ನೀಡಲಾಗಿದೆ. ಇಡೀ ದೇಶದಲ್ಲಿ ಇಲೆಕ್ಟ್ರಿಕ್ ಆಟೋಗಳಿಗೆ ಒಂದೇ ನಿಯಮ ಇದೆ. ವಲಯ ವಿಂಗಡಣೆ ಮಾತ್ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇದೆ ಎಂದು ತಿಳಿಸಿದರು.
ಆಟೋ ಚಾಲಕರ ಬೇಡಿಕೆ ಕುರಿತಂತೆ ಚರ್ಚಿಸಲು ಆಟೋ ಸಂಘಟನೆಗಳೊಂದಿಗೆ ಸೆ.5ರಂದು ಸಭೆ ನಡೆಸಲಾಗುವುದು. ಜಿಲ್ಲೆಯ ಒಳಗಡೆ ವಲಯ ವಿಂಗಡಣೆ ಬೇಡ ಎಂದಾದರೆ ಅದರ ಬಗ್ಗೆ ಚರ್ಚೆ ನಡೆಸಬಹುದು. ಆದರೆ ಇ-ಆಟೋಗಳ ಕುರಿತಾಗಿ ದೇಶಾದ್ಯಂತ ಏಕರೂಪದ ಕಾನೂನು ಇರುವಾಗ ಬದಲಾವಣೆ ಮಾಡಲಾಗಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ಲಾಡ್ ಉಪಸ್ಥಿತರಿದ್ದರು.
Dakshina Kannada deputy commissioner Mullai Muhilan on Thursday, August 29 dismissed the demand by petrol, LPG, and CNG autorickshaw drivers to impose regulated zones on electric autorickshaws, stating that there is no provision for such restrictions under the existing Motor Vehicles Act (MVA) of 1988.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm