ಬ್ರೇಕಿಂಗ್ ನ್ಯೂಸ್
01-09-24 07:11 pm Udupi Correspondent ಕರಾವಳಿ
ಉಡುಪಿ, ಸೆ 01: ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ರಿಷಬ್ ಶೆಟ್ಟಿ ಮತ್ತು ಜ್ಯೂ. ಎನ್ಟಿಆರ್ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.
ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಸ್ಟಾರ್ ನಟರು ದೇವರ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದರು.
ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ರಿಷಬ್ ಶೆಟ್ಟಿ ಮತ್ತು ಎನ್.ಟಿ.ಆರ್ ಮಂಗಳೂರು ಏರ್ಪೋರ್ಟ್ನಲ್ಲಿ ಭೇಟಿಯಾಗಿದ್ದರು ಮತ್ತು ಡಿವೈನ್ ಸ್ಟಾರ್, ಟೈಗರ್ನನ್ನು ಸ್ವಾಗತಿಸಿದ್ದರು.







ಸೆ.2ರಂದು ನನ್ನ ತಾಯಿ ಹುಟ್ಟುಹಬ್ಬ ಇದೆ. ಅವರ ತವರು ಕುಂದಾಪುರಕ್ಕೆ ಬರಬೇಕೆಂಬ ಮಹಾದಾಸೆ ಇತ್ತು. ಮಗನಾಗಿ ಅವರ ಸಣ್ಣ ಆಸೆಯನ್ನು ಈಡೇರಿಸುವುದೇ ನನ್ನ ಭಾಗ್ಯ. ಅವರ ಹುಟ್ಟುಹಬ್ಬಕ್ಕೆ ಇದೇ ದೊಡ್ಡ ಗಿಫ್ಟ್. ಅಮ್ಮನನ್ನು ಕರೆದುಕೊಂಡು ಬಂದಿದ್ದು ಖುಷಿ ಆಯಿತು. ಜತೆಗೆ ಆಸೆ ಈಡೇರಿಸಿ ಎಂಬ ನೆಮ್ಮದಿ ಇದೆ ಎಂದು ಟಾಲಿವುಡ್ ನಟ ಜ್ಯೂ.ಎನ್ಟಿಆರ್ ತಿಳಿಸಿದರು.
ಅಮ್ಮ ಯಾವಾಗಲೂ ಶ್ರೀಕೃಷ್ಣನ ದರ್ಶನಕ್ಕಾಗಿ ಅವರ ತವರು ಮನೆಯಾದ ಕುಂದಾಪುರದಿಂದ ಉಡುಪಿಗೆ ಹೋಗುವಂತೆ ನನ್ನನ್ನು ಒತ್ತಾಯಿಸುತ್ತಿದ್ದರು. ಈಗ ಅವರ ಕನಸು ನನಸಾಗಿದೆ. ಸೆಪ್ಟೆಂಬರ್ 2 ರಂದು ಅವರ ಹುಟ್ಟುಹಬ್ಬ. ಅದಕ್ಕೂ ಮುಂಚೆಯೇ ಈ ಬಾರಿ ಗಿಫ್ಟ್ ಇದಾಗಿರಲಿದೆ ಎಂದಿದ್ದಾರೆ. ನಿರ್ಮಾಪಕ (ಹೊಂಬಾಳೆ ಫಿಲಂಸ್ ಮುಖ್ಯಸ್ಥ) ವಿಜಯ್ ಕಿರಗಂದುರ್ ಸರ್ಗೆ ಧನ್ಯವಾದಗಳು. ನನ್ನ ಗೆಳೆಯ ಪ್ರಶಾಂತ್ ನೀಲ್ ಅವರೊಂದಿಗೆ ಇಲ್ಲಿಗೆ ಬಂದಿರುವ ಬಗ್ಗೆ ಸಂತೋಷವಿದೆ. ಅಲ್ಲದೇ ನಟ ರಿಷಬ್ ಶೆಟ್ಟಿ ಅವರೂ ಸಹ ನಮ್ಮೊಂದಿಗೆ ಬಂದು ಈ ಸಂತೋಷದ ಕ್ಷಣಗಳನ್ನು ಇನ್ನಷ್ಟು ಸ್ಪೆಷಲ್ ಮಾಡಿದ್ರು ಎಂದು ಹೇಳಿದ್ದಾರೆ.
ಇನ್ನು ಜ್ಯೂನಿಯರ್ ಎನ್ಟಿಆರ್ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆ ನಟ. ಸದ್ಯ ಅವರು ದೇವರ ಎನ್ನುವ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ನಾಯಕಿಯಾಗಿ ಜಾನ್ವಿ ಕಪೂರ್ ಅವರು ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 27 ರಂದು ಚಿತ್ರದ ಮೊದಲ ಭಾಗ ಭಾರತದಾದ್ಯಂತ ಬಿಡುಗಡೆ ಆಗಲಿದೆ.
Jr NTR and Rishab Shetty, along with filmmaker Prashanth Neel, were spotted in Mangaluru on Saturday. The trio, joined by Jr NTR’s family, visited a temple in Udupi to seek blessings.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm