ಬ್ರೇಕಿಂಗ್ ನ್ಯೂಸ್
04-09-24 05:31 pm Mangalore Correspondent ಕರಾವಳಿ
ಕಡಬ, ಸೆ 04: ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ. ಅವರು ವಜಾಗೊಳಿಸಿದ್ದಾರೆ.
ಕೇರಳ ಮಲಪ್ಪುರಂ ನಿವಾಸಿ ಅಬಿನ್ ಎಂಬಾತ ವಿದ್ಯಾರ್ಥಿನಿಯು ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಕೃತ್ಯ ಎಸಗಿದ್ದ. ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ, ಪಡೆದುಕೊಂಡು ಬಂದಿದ್ದ. ಕೊಯಮುತ್ತೂರಿನಿಂದ ಆ್ಯಸಿಡ್ ಖರೀದಿಸಿ, ಸಮವಸ್ತ್ರ ಧರಿಸಿಕೊಂಡಿದ್ದ ಆರೋಪಿ, ಮಾರ್ಚ್ 4ರಂದು ಬೆಳಗ್ಗೆ ಕಾಲೇಜಿಗೆ ಬಂದು ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ. ಈ ವೇಳೆ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಗಾಯಗಳಾಗಿದ್ದವು.
ಈ ಬಗ್ಗೆ ಯುವಕನ ಜಾಮೀನು ಅರ್ಜಿ ವಿಚಾರಣೆಯು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಗಾಯಗೊಂಡಿದ್ದ ವಿದ್ಯಾರ್ಥಿನಿಯರು ಈಗಲೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ, ಆರೋಪಿಗೆ ಜಾಮೀನು ನೀಡಿದರೆ, ವಿದ್ಯಾರ್ಥಿನಿಯಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟ ಕೋರ್ಟ್, ದೋಷಾರೋಪಣಾ ಪತ್ರದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.
ಪ್ರಕರಣದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ ಕೆ. ಭಟ್ ವಾದ ಮಂಡಿಸಿದರು.
Kadaba acid attack on students, puttur court rejects bail plea of accused Abin.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am