ಬ್ರೇಕಿಂಗ್ ನ್ಯೂಸ್
05-09-24 05:49 pm Mangalore Correspondent ಕರಾವಳಿ
ಉಳ್ಳಾಲ, ಸೆ.5: ತಲಪಾಡಿಯಿಂದ ಮಂಗಳೂರು ನಡುವೆ ಚಲಿಸುವ ಪದ್ಮ ಟ್ರಾವೆಲ್ಸ್ ಖಾಸಗಿ ನಗರ ಸಾರಿಗೆ ಬಸ್ ಮತ್ತು ಮಂಜೇಶ್ವರದ ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಖಾಸಗಿ ಸರ್ವಿಸ್ ಬಸ್ ನಿರ್ವಾಹಕರ ನಡುವೆ ತೊಕ್ಕೊಟ್ಟಿನಲ್ಲಿ ಹೊಯ್ ಕೈ ನಡೆದಿದ್ದು, ಬೀದಿ ಕಾಳಗದ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬುಧವಾರ ಸಾಯಂಕಾಲ 3.40ರ ವೇಳೆ ತೊಕ್ಕೊಟ್ಟು ಸಮೀಪದ ಓವರ್ ಬ್ರಿಡ್ಜ್ ರೈಲ್ವೇ ಮೇಲ್ಸೇತುವೆ ಬಳಿಯ ಬಸ್ಸು ತಂಗುದಾಣದಲ್ಲಿ ಈ ಘಟನೆ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಅಸರ್ ಟ್ರಾವೆಲ್ಸ್ ಬಸ್ಸನ್ನು ಬೆನ್ನಟ್ಟಿದ ಪದ್ಮ ಟ್ರಾವೆಲ್ಸ್ ಬಸ್ ಚಾಲಕ ಓವರ್ ಬ್ರಿಡ್ಜ್ ಬಸ್ಸು ನಿಲ್ದಾಣದಲ್ಲಿ ಅಡ್ಡಲಾಗಿ ಇಟ್ಟಿದ್ದಾನೆ. ಈ ವೇಳೆ ಎರಡು ಬಸ್ಸು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದು ಹೊಯ್ ಕೈಯಾಗಿ ಬೀದಿ ಕಾಳಗ ಆಗಿದೆ.
ಈ ವೇಳೆ ಓವರ್ ಬ್ರಿಡ್ಜ್ ಆಟೋ ರಿಕ್ಷಾ ಪಾರ್ಕಿನ ರಿಕ್ಷಾ ಚಾಲಕರಾದ ಆನಂದ್ ಮತ್ತು ದೀಪಕ್ ಅವರು ಮಧ್ಯ ಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು ಬಸ್ಸು ನಿರ್ವಾಹಕರನ್ನ ಸಮಾಧಾನಗೊಳಿಸಿ ಕಳಿಸಿದ್ದಾರೆ. ಕಂಡಕ್ಟರ್ ಗಳು ಬೀದಿಯಲ್ಲಿ ಕಾದಾಡುತ್ತಿರುವ ದೃಶ್ಯವನ್ನು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಸಹ ಪ್ರಯಾಣಿಕರೊಬ್ಬರು ಮೊಬೈಲಿನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.
ಖಾಸಗಿ ಬಸ್ ಚಾಲಕರ ಟೈಮಿಂಗ್ಸ್ ನಿಂದಾಗಿ ಗಲಾಟೆ, ಅಪಘಾತಗಳಾಗುತ್ತಿದ್ದು ಬಸ್ಸು ಪ್ರಯಾಣಿಕರು ಮತ್ತು ಸಾರ್ವಜನಿಕರು ಇದರಿಂದ ನಿತ್ಯ ಕಿರಿ ಕಿರಿ, ಸಮಸ್ಯೆ ಅನುಭವಿಸುವಂತಾಗಿದೆ. ಇಂದು ಬೀದಿಯಲ್ಲಿ ಗಲಾಟೆ ನಡೆಸಿದ ಕಂಡಕ್ಟರ್ ಗಳು ಅದೇ ವೈಷಮ್ಯದಲ್ಲಿ ನಾಳೆ ತಲ್ವಾರು ಮಚ್ಚು ಹಿಡಿದು ಕಾಳಗ ನಡೆಸಲೂ ಹೇಸಲಾರರು. ಮಂಗಳೂರು ಪೊಲೀಸ್ ಆಯುಕ್ತರು ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
#Mangalore #Bus drivers #fight assult over bus timings at #Thokottu, video goes viral. Bus drivers of both Padma and Asar buses fight and assult each other over bus timings in the middle of the road #mangalorenews @compolmlr @alokkumar6994 pic.twitter.com/a4h04GxFHu
— Headline Karnataka (@hknewsonline) September 5, 2024
Mangalore Bus drivers fight assult over bus timings at Thokottu, video goes viral. Bus drivers of both Padma and Asar fight and assult each other fighting on the road over timing.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm