ಬ್ರೇಕಿಂಗ್ ನ್ಯೂಸ್
05-09-24 05:49 pm Mangalore Correspondent ಕರಾವಳಿ
ಉಳ್ಳಾಲ, ಸೆ.5: ತಲಪಾಡಿಯಿಂದ ಮಂಗಳೂರು ನಡುವೆ ಚಲಿಸುವ ಪದ್ಮ ಟ್ರಾವೆಲ್ಸ್ ಖಾಸಗಿ ನಗರ ಸಾರಿಗೆ ಬಸ್ ಮತ್ತು ಮಂಜೇಶ್ವರದ ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಖಾಸಗಿ ಸರ್ವಿಸ್ ಬಸ್ ನಿರ್ವಾಹಕರ ನಡುವೆ ತೊಕ್ಕೊಟ್ಟಿನಲ್ಲಿ ಹೊಯ್ ಕೈ ನಡೆದಿದ್ದು, ಬೀದಿ ಕಾಳಗದ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬುಧವಾರ ಸಾಯಂಕಾಲ 3.40ರ ವೇಳೆ ತೊಕ್ಕೊಟ್ಟು ಸಮೀಪದ ಓವರ್ ಬ್ರಿಡ್ಜ್ ರೈಲ್ವೇ ಮೇಲ್ಸೇತುವೆ ಬಳಿಯ ಬಸ್ಸು ತಂಗುದಾಣದಲ್ಲಿ ಈ ಘಟನೆ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಅಸರ್ ಟ್ರಾವೆಲ್ಸ್ ಬಸ್ಸನ್ನು ಬೆನ್ನಟ್ಟಿದ ಪದ್ಮ ಟ್ರಾವೆಲ್ಸ್ ಬಸ್ ಚಾಲಕ ಓವರ್ ಬ್ರಿಡ್ಜ್ ಬಸ್ಸು ನಿಲ್ದಾಣದಲ್ಲಿ ಅಡ್ಡಲಾಗಿ ಇಟ್ಟಿದ್ದಾನೆ. ಈ ವೇಳೆ ಎರಡು ಬಸ್ಸು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದು ಹೊಯ್ ಕೈಯಾಗಿ ಬೀದಿ ಕಾಳಗ ಆಗಿದೆ.
ಈ ವೇಳೆ ಓವರ್ ಬ್ರಿಡ್ಜ್ ಆಟೋ ರಿಕ್ಷಾ ಪಾರ್ಕಿನ ರಿಕ್ಷಾ ಚಾಲಕರಾದ ಆನಂದ್ ಮತ್ತು ದೀಪಕ್ ಅವರು ಮಧ್ಯ ಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು ಬಸ್ಸು ನಿರ್ವಾಹಕರನ್ನ ಸಮಾಧಾನಗೊಳಿಸಿ ಕಳಿಸಿದ್ದಾರೆ. ಕಂಡಕ್ಟರ್ ಗಳು ಬೀದಿಯಲ್ಲಿ ಕಾದಾಡುತ್ತಿರುವ ದೃಶ್ಯವನ್ನು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಸಹ ಪ್ರಯಾಣಿಕರೊಬ್ಬರು ಮೊಬೈಲಿನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.
ಖಾಸಗಿ ಬಸ್ ಚಾಲಕರ ಟೈಮಿಂಗ್ಸ್ ನಿಂದಾಗಿ ಗಲಾಟೆ, ಅಪಘಾತಗಳಾಗುತ್ತಿದ್ದು ಬಸ್ಸು ಪ್ರಯಾಣಿಕರು ಮತ್ತು ಸಾರ್ವಜನಿಕರು ಇದರಿಂದ ನಿತ್ಯ ಕಿರಿ ಕಿರಿ, ಸಮಸ್ಯೆ ಅನುಭವಿಸುವಂತಾಗಿದೆ. ಇಂದು ಬೀದಿಯಲ್ಲಿ ಗಲಾಟೆ ನಡೆಸಿದ ಕಂಡಕ್ಟರ್ ಗಳು ಅದೇ ವೈಷಮ್ಯದಲ್ಲಿ ನಾಳೆ ತಲ್ವಾರು ಮಚ್ಚು ಹಿಡಿದು ಕಾಳಗ ನಡೆಸಲೂ ಹೇಸಲಾರರು. ಮಂಗಳೂರು ಪೊಲೀಸ್ ಆಯುಕ್ತರು ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
#Mangalore #Bus drivers #fight assult over bus timings at #Thokottu, video goes viral. Bus drivers of both Padma and Asar buses fight and assult each other over bus timings in the middle of the road #mangalorenews @compolmlr @alokkumar6994 pic.twitter.com/a4h04GxFHu
— Headline Karnataka (@hknewsonline) September 5, 2024
Mangalore Bus drivers fight assult over bus timings at Thokottu, video goes viral. Bus drivers of both Padma and Asar fight and assult each other fighting on the road over timing.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm