ಬ್ರೇಕಿಂಗ್ ನ್ಯೂಸ್
07-09-24 06:06 pm Mangalore Correspondent ಕರಾವಳಿ
ಉಳ್ಳಾಲ, ಸೆ.7: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ" ಚಿತ್ರದಲ್ಲಿ "ದ್ವಾಪರ ದಾಟುತ ನನ್ನನೆ ನೋಡಲು ನನ್ನನೆ ಸೇರಲು ಬಂದ ರಾಧಿಕೆ..." ಹಾಡಿನ ಮೂಲಕ ಯುವ ಮನಸ್ಸುಗಳನ್ನು ಆಕರ್ಷಿಸಿದ್ದ ಝೀ ಕನ್ನಡದ ಸರಿಗಮಪ ಖ್ಯಾತಿಯ ಗಾಯಕ ಜಸ್ಕರನ್ ಸಿಂಗ್ ಅವರು ಗಣೇಶ ಹಬ್ಬದಂದು ಉಳ್ಳಾಲ ತಾಲೂಕಿನ ಕಲ್ಲಾಪುವಿನ ಬುರ್ದುಗೋಳಿ ಗುಳಿಗ- ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಸರಿಪಳ್ಳದಲ್ಲಿ ಕದ್ರಿ ಈವೆಂಟ್ಸ್ ಆಯೋಜಿಸಿರುವ ಮ್ಯೂಸಿಕಲ್ ನೈಟಲ್ಲಿ ಪ್ರದರ್ಶನ ನೀಡಲು ಬಂದಿರುವ ಜಸ್ಕರನ್ ಸಿಂಗ್ ಅವರು ಕದ್ರಿ ಮಂಜುನಾಥೇಶ್ವರ ಕ್ಷೇತ್ರಕ್ಕೆ ತೆರಳಿದ ಬಳಿಕ ಬುರ್ದುಗೋಳಿಯ ಗುಳಿಗ-ಕೊರಗಜ್ಜನ ಸಾನಿಧ್ಯಕ್ಕೆ ಭೇಟಿ ನೀಡಿದರು. ಕ್ಷೇತ್ರದ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಕುಲಾಲ್ ಅವರು ಜಸ್ಕರನ್ ಸಿಂಗ್ ಅವರನ್ನ ಬರಮಾಡಿಕೊಂಡರು.
ಸಾನಿಧ್ಯದ ಸಂಪ್ರದಾಯದಂತೆ ಕೊರಗಜ್ಜನಿಗೆ ಬೀಡ ಚಕ್ಕುಳಿ ಇಟ್ಟು ಜಸ್ಕರನ್ ಅವರು ಪ್ರಾರ್ಥನೆ ಸಲ್ಲಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿನ ಕದ್ರಿ ಮತ್ತು ಬುರ್ದುಗೋಳಿಯ ಗುಳಿಗ-ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ವಿಭಿನ್ನವಾದ ದೈವಿಕ ಭಾವನೆ ಜಾಗೃತಗೊಂಡಿದ್ದು, ಇಂದಿನ ಮಂಗಳೂರಿನ ಪ್ರದರ್ಶನದ ಯಶಸ್ಸಿಗೂ ದೈವ, ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು. ಸ್ಯಾಂಡಲ್ ವುಡ್ಡಲ್ಲಿ ಹಾಡಲು ಸಾಕಷ್ಟು ಆಫರ್ ಗಳು ಬಂದಿವೆ. ಅರ್ಜುನ್ ಜನ್ಯರ ಸಂಗೀತಕ್ಕೆ ಹಾಡೊಂದನ್ನ ಹೇಳಿದ್ದು ಅದು ರೆಕಾರ್ಡ್ ಆಗಿದೆ. ಬೇರೆ ಸಿಂಗಲ್ ಪ್ರಾಜೆಕ್ಟಲ್ಲೂ ಕೆಲಸ ಮಾಡುತ್ತಿದ್ದೇನೆ. ತಮಿಳಲ್ಲೂ ಹಾಡುಗಳು ರೆಕಾರ್ಡ್ ಆಗಿದೆ. ಪಂಜಾಬಿ ಚಿತ್ರಗಳು ಮತ್ತು ಸೋಲೊ ಆಲ್ಬಮ್ ಗಳಿಗಾಗಿ ಹಾಡುತ್ತಿದ್ದು ಅದರ ರೆಕಾರ್ಡಿಂಗ್ ನಡೆಯುತ್ತಿದೆ ಎಂದರು.
ಬುರ್ದುಗೋಳಿ ಕ್ಷೇತ್ರದ ವತಿಯಿಂದ ಜಸ್ಕರನ್ ಸಿಂಗ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಝೀ ಕನ್ನಡ ಸರಿಗಮಪ ಖ್ಯಾತಿಯ ಹಾಡುಗಾರ ಅಮಿಷ್ ಕುಮಾರ್ ಕೆ, ಕದ್ರಿ ಈವೆಂಟ್ಸ್ ನ ಪ್ರಮುಖರಾದ ಜಗದೀಶ್ ಕದ್ರಿ ಜತೆಯಲ್ಲಿದ್ದರು. ಕ್ಷೇತ್ರ ಸಮಿತಿಯ ಚಂದ್ರಹಾಸ್ ಪಂಡಿತ್ ಹೌಸ್, ನವೀನ್ ಕಾಯಂಗಳ, ಜಯಶ್ರೀ ಕೊಟ್ಟಾರಿ ಉಪಸ್ಥಿತರಿದ್ದರು.
Ganesh movie Dwapara song singer Jaskaran Singh visits Kuttaru Koragajja temple in Mangalore.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm