ಬ್ರೇಕಿಂಗ್ ನ್ಯೂಸ್
10-09-24 07:41 pm Mangalore Correspondent ಕರಾವಳಿ
ಪುತ್ತೂರು, ಸೆ.10: ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್.ಐ.ಆರ್ ಮತ್ತು ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
14 ತಿಂಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 47ರ ಹರೆಯದ ಮಹಿಳೆಯೋರ್ವರು ನೀಡಿದ ದೂರಿನಂತೆ ವಾರದ ಹಿಂದೆ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಸುಳ್ಳು ಆರೋಪ ಹೊರಿಸಲಾಗಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ, ಅತ್ಯಾಚಾರ ಎಸಗಲಾಗಿದೆ ಎಂದು ಸುಳ್ಳು ದೂರು ನೀಡಿರುವುದಾಗಿ ವಾದಿಸಿದರು.
ಅರುಣ್ ಪುತ್ತಿಲ ಅವರೊಂದಿಗೆ ಮಹಿಳೆ ಮಾತನಾಡಿದ ಆಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು. ಇದರ ಬಳಿಕ ಪುತ್ತಿಲ, ಬೆಂಗಳೂರಿನ ಸಿಟಿ ನ್ಯಾಯಾಲಯದಲ್ಲಿ ಮಾನಹಾನಿಯಾಗುವ ವರದಿಗಳನ್ನು ಪ್ರಸಾರಿಸದಂತೆ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದರು. ಆನಂತರ, ಮಹಿಳೆ ಠಾಣೆಗೆ ತೆರಳಿ ದೂರು ನೀಡಿದ್ದು, ಇದೊಂದು ಸುಳ್ಳು ಆರೋಪವಾಗಿದೆ. ಪುತ್ತಿಲರ ರಾಜಕೀಯ ವಿರೋಧಿಗಳು ಈ ಕೃತ್ಯದ ಹಿಂದಿದ್ದಾರೆ ಎಂದು ಪಿ.ಪಿ.ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು.
ಈ ಕುರಿತು ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪುತ್ತಿಲ ಪರ ವಕೀಲರು ಕೋರಿದ್ದು ಇದನ್ನು ಮಾನ್ಯ ಮಾಡಿ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
High court holds Arun puthila sexual harassment case, lawyer argues as fake case. Puttila Parivara founder and BJP leader Arun Kumar Puthila obtained bail from a Magistrate Court in Puttur on Monday, September 2, in connection with a case of sexual harassment registered against him by the Dakshina Kannada Women Police in Puttur on Sunday, September 1.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm