ಬ್ರೇಕಿಂಗ್ ನ್ಯೂಸ್
11-09-24 12:56 pm Mangalore Correspondent ಕರಾವಳಿ
ಉಳ್ಳಾಲ, ಸೆ. 11: ಭಾರಿ ಗಾತ್ರದ ಹಸುವೊಂದು ಏಕಾಏಕಿ ಹುಚ್ಚೆದ್ದು ಮನೆಯೊಂದರ ಆವರಣಕ್ಕೆ ನುಗ್ಗಿ ದಾಂಧಲೆ ನಡೆಸಿದಲ್ಲದೆ, ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟರ್, ಮಹಿಳೆ ಸೇರಿದಂತೆ ಅನೇಕರಿಗೆ ತಿವಿದು ಗಾಯಗೊಳಿಸಿರುವ ಘಟನೆ ಸೋಮೇಶ್ವರ ಬಳಿ ನಡೆದಿದೆ. ಸ್ಥಳೀಯರು ಬಳಿಕ ಹರಸಾಹಸ ಪಟ್ಟು ಹಸುವನ್ನ ಹಿಡಿದಿದ್ದು, ಪಶು ವೈದ್ಯರು ಅರಿವಳಿಕೆ ನೀಡಿದ ಕೆಲವೇ ಹೊತ್ತಿನಲ್ಲಿ ಹಸು ಮೃತಪಟ್ಟಿದ್ದರಿಂದ ರೇಬೀಸ್ ಸೋಂಕಿನ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಸೋಮೇಶ್ವರ ದ್ವಾರದ ಬಳಿಯ ನಿವಾಸಿಯೋರ್ವರಿಗೆ ಸೇರಿದ ಹಸು ಏಕಾಏಕಿ ಹುಚ್ಚೆದ್ದ ರೀತಿ ವರ್ತಿಸಿದ್ದು ಸ್ಥಳೀಯರನ್ನು ಭಯಭೀತಗೊಳಿಸಿದೆ. ಮೇಯಲು ಬಿಟ್ಟಿದ್ದ ಹಸು ನಿನ್ನೆ ಸಂಜೆ ಏಕಾಏಕಿ ಹುಚ್ಚೆದ್ದು ಮಹಿಳೆಯೋರ್ವರಿಗೆ ತಿವಿದಿದೆ. ಅಲ್ಲಿಂದ ಮುಂದಕ್ಕೆ ಓಡಿದ ಹಸುವು ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿಗೆ ಸಾಗಿ ಸ್ಕೂಟರ್ ಒಂದಕ್ಕೆ ತಿವಿದಿದ್ದು , ಸಿಕ್ಕ, ಸಿಕ್ಕವರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಮನೆಯ ಆವರಣ ಗೋಡೆಯೊಳಕ್ಕೆ ನುಗ್ಗಿ ಧಾಂದಲೆ ನಡೆಸಿದೆ.
ಭಯಗೊಂಡ ಸ್ಥಳೀಯರು ಸೋಮೇಶ್ವರ ಪುರಸಭಾ ಉಪಾಧ್ಯಕ್ಷ ರವಿಶಂಕರ್ ಅವರಲ್ಲಿ ವಿಚಾರ ತಿಳಿಸಿದ್ದಾರೆ. ರವಿಶಂಕರ್ ಅವರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಬರಲು ತಿಳಿಸಿದ್ದು ಅಧಿಕಾರಿಗಳು ಅದು ನಮ್ಮ ಕೆಲಸವಲ್ಲ ಅಂತ ಹೇಳಿ ಜಾರಿಕೊಂಡಿದ್ದಾರೆ. ವಿಧಿಯಿಲ್ಲದೆ ರವಿಶಂಕರ್ ಅವರೇ ಸ್ಥಳೀಯರ ಜತೆ ಸೇರಿ ಬಹಳ ಹರಸಾಹಸ ಪಟ್ಟು ಹಗ್ಗದಿಂದ ಧಾಂದಲೆ ನಡೆಸುತ್ತಿದ್ದ ಹಸುವನ್ನ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಸುವಿನ ವಿಚಾರ ಸ್ಥಳೀಯ ಶಾಸಕ ಯು.ಟಿ.ಖಾದರ್ ಗಮನಕ್ಕೂ ಬಂದಿದ್ದು ಕೂಡಲೇ ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳ ತಂಡವನ್ನ ರವಾನಿಸಿದ್ದಾರೆ. ಸ್ಥಳೀಯರು ಹಿಡಿದ ಹಸುವಿಗೆ ಪಶು ವೈದ್ಯರು ಅರಿವಳಿಕೆ ಚುಚ್ಚುಮದ್ದು ನೀಡಿದ್ದು ಕೆಲ ಹೊತ್ತಲ್ಲೇ ಹಸು ಸಾವನ್ನಪ್ಪಿದೆ.
ಬಹುತೇಕ ರೇಬೀಸ್ ಕಾಯಿಲೆಯಿಂದಲೇ ಹುಚ್ಚೆದ್ದು ಧಾಂದಲೆ ನಡೆಸಿರುವುದಾಗಿ ಕೋಟೆಕಾರು ಸರಕಾರಿ ಪಶು ಆಸ್ಪತ್ರೆಯ ಪಶು ವೈಧ್ಯಾಧಿಕಾರಿ ಡಾ.ಗಜೇಂದ್ರ ಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಧೃಢೀಕರಿಸಲು ದನದ ಮೆದುಳನ್ನ ಪ್ರಯೋಗಾಲಯಕ್ಕೆ ಕಳುಹಿಸ ಬೇಕಾಗುತ್ತದೆ. ಆದರೆ ಅದಕ್ಕೆ ಹಸುವಿನ ಮಾಲಕರು ಒಪ್ಪಿಗೆ ನೀಡಬೇಕು. ಹುಚ್ಚು ನಾಯಿಯ ಕಡಿತದಿಂದ ರೇಬೀಸ್ ಆವರಿಸಿರಬಹುದು. ರೇಬೀಸ್ ಆವರಿಸಿದರೆ ಹಸು ಹೆಚ್ಚು ಕಾಲ ಬದುಕಲು ಸಾಧ್ಯವಿಲ್ಲ. ಹಸುವಿನಿಂದ ನೇರವಾಗಿ ರೇಬಿಸ್ ಹರಡುವುದು ಕಡಿಮೆ. ಆದರೆ, ಅದರ ಜೊಲ್ಲು ತೆರೆದ ಗಾಯಕ್ಕೆ ತಗುಲಿದರೆ ಮಾತ್ರ ರೇಬೀಸ್ ಹರಡಲು ಸಾಧ್ಯವಿದೆ ಎಂದು ಗಜೇಂದ್ರ ಕುಮಾರ್ ಹೇಳಿದ್ದಾರೆ.
Mangalore Rabies attack on cow, attacks residents in Someshwara, forest officals trap cow after long rescue operation but the cow was later found dead.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm