ಬ್ರೇಕಿಂಗ್ ನ್ಯೂಸ್
12-09-24 08:24 pm Mangalore Correspondent ಕರಾವಳಿ
ಮಂಗಳೂರು, ಸೆ.12: ಮುಂದಿನ ವಾರ ಈದ್ ಮಿಲಾದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು. ಈದ್ ಮಿಲಾದ್ ಮೆರವಣಿಗೆಯನ್ನು ರಸ್ತೆಯಲ್ಲಿ ಮಾಡುವಾಗ, ಒಂದ್ವೇಳೆ ಹಿಂದುಗಳು ಅವಕಾಶ ನೀಡದಿದ್ದರೆ ಜಿಹಾದಿಗಳ ಮೆರವಣಿಗೆ ನಡೆಯುವುದಕ್ಕೆ ಸಾಧ್ಯವಿಲ್ಲ. ಕಳೆದ ಬಾರಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮೆರವಣಿಗೆ ವೇಳೆ ಗಲಭೆ ನಡೆಸಿದ್ದರು. ಈ ಬಾರಿಯೂ ರಾಜ್ಯದಲ್ಲಿ ಗಲಭೆ ಮರುಕಳಿಸುವ ಸಾಧ್ಯತೆಯಿದೆ. ಹೀಗಾಗಿ ಈ ಬಾರಿ ಈದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಿ ಗಲಭೆ ನಡೆಸಿರುವುದನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಬಾರಿ ಈದ್ ಮೆರವಣಿಗೆಯ ಮೇಲೆ ನಿರ್ಬಂಧ ಹೇರಬೇಕು, ಒಂದ್ವೇಳೆ ಮೆರವಣಿಗೆಗೆ ಅವಕಾಶ ಕೊಟ್ಟು ಹಿಂದುಗಳ ಮೇಲೆ ಹಲ್ಲೆ ಘಟನೆಗಳಾದಲ್ಲಿ ಅದಕ್ಕೆ ರಾಜ್ಯ ಸರಕಾರವೇ ಕಾರಣವಾಗುತ್ತದೆ ಎಂದು ಹೇಳಿದರು.




ನಾಗಮಂಗಲ ಗಲಭೆಯ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆಯ ಕೈವಾಡ ಇದೆಯೇ ಎನ್ನುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅಲ್ಲಿ ನೂರಾರು ಹಿಂದುಗಳ ಮೇಲೆ ಹಲ್ಲೆಯಾಗಿದೆ, ಹತ್ತಾರು ಅಂಗಡಿಗಳಿಗೆ ಬೆಂಕಿ ಕೊಟ್ಟಿದ್ದಾರೆ. ಸಾರ್ವಜನಿಕ ಆಸ್ತಿ ಮೇಲೆ ಹಾನಿ ಮಾಡಿದ್ದಾರೆ. ನಷ್ಟ ಆದವರಿಗೆ ಪರಿಹಾರ ನೀಡಬೇಕು. ಯಾರು ಮುಗ್ಧ ಅಮಾಯಕರ ಮೇಲೆ ಕೇಸು ಹಾಕಿದ್ದೀರಿ, ಅವರ ಮೇಲಿನ ಕೇಸನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಶರಣ್, ನಮಗೆ ರಾಜ್ಯ ಸರಕಾರ, ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ನಮ್ಮ ಧಾರ್ಮಿಕ ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡುತ್ತೇವೆ. ಪೊಲೀಸರ ಬದಲು ಕೇಂದ್ರದ ಮಿಲಿಟರಿಯ ರಕ್ಷಣೆ ನೀಡಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Don't give permission for Eid says Sharan Pumpwell, VHP in Mangalore. Says tense situations like Ragi gudda might re appear.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am