ಬ್ರೇಕಿಂಗ್ ನ್ಯೂಸ್
12-09-24 08:24 pm Mangalore Correspondent ಕರಾವಳಿ
ಮಂಗಳೂರು, ಸೆ.12: ಮುಂದಿನ ವಾರ ಈದ್ ಮಿಲಾದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು. ಈದ್ ಮಿಲಾದ್ ಮೆರವಣಿಗೆಯನ್ನು ರಸ್ತೆಯಲ್ಲಿ ಮಾಡುವಾಗ, ಒಂದ್ವೇಳೆ ಹಿಂದುಗಳು ಅವಕಾಶ ನೀಡದಿದ್ದರೆ ಜಿಹಾದಿಗಳ ಮೆರವಣಿಗೆ ನಡೆಯುವುದಕ್ಕೆ ಸಾಧ್ಯವಿಲ್ಲ. ಕಳೆದ ಬಾರಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮೆರವಣಿಗೆ ವೇಳೆ ಗಲಭೆ ನಡೆಸಿದ್ದರು. ಈ ಬಾರಿಯೂ ರಾಜ್ಯದಲ್ಲಿ ಗಲಭೆ ಮರುಕಳಿಸುವ ಸಾಧ್ಯತೆಯಿದೆ. ಹೀಗಾಗಿ ಈ ಬಾರಿ ಈದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಿ ಗಲಭೆ ನಡೆಸಿರುವುದನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಬಾರಿ ಈದ್ ಮೆರವಣಿಗೆಯ ಮೇಲೆ ನಿರ್ಬಂಧ ಹೇರಬೇಕು, ಒಂದ್ವೇಳೆ ಮೆರವಣಿಗೆಗೆ ಅವಕಾಶ ಕೊಟ್ಟು ಹಿಂದುಗಳ ಮೇಲೆ ಹಲ್ಲೆ ಘಟನೆಗಳಾದಲ್ಲಿ ಅದಕ್ಕೆ ರಾಜ್ಯ ಸರಕಾರವೇ ಕಾರಣವಾಗುತ್ತದೆ ಎಂದು ಹೇಳಿದರು.




ನಾಗಮಂಗಲ ಗಲಭೆಯ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆಯ ಕೈವಾಡ ಇದೆಯೇ ಎನ್ನುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅಲ್ಲಿ ನೂರಾರು ಹಿಂದುಗಳ ಮೇಲೆ ಹಲ್ಲೆಯಾಗಿದೆ, ಹತ್ತಾರು ಅಂಗಡಿಗಳಿಗೆ ಬೆಂಕಿ ಕೊಟ್ಟಿದ್ದಾರೆ. ಸಾರ್ವಜನಿಕ ಆಸ್ತಿ ಮೇಲೆ ಹಾನಿ ಮಾಡಿದ್ದಾರೆ. ನಷ್ಟ ಆದವರಿಗೆ ಪರಿಹಾರ ನೀಡಬೇಕು. ಯಾರು ಮುಗ್ಧ ಅಮಾಯಕರ ಮೇಲೆ ಕೇಸು ಹಾಕಿದ್ದೀರಿ, ಅವರ ಮೇಲಿನ ಕೇಸನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಶರಣ್, ನಮಗೆ ರಾಜ್ಯ ಸರಕಾರ, ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ನಮ್ಮ ಧಾರ್ಮಿಕ ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡುತ್ತೇವೆ. ಪೊಲೀಸರ ಬದಲು ಕೇಂದ್ರದ ಮಿಲಿಟರಿಯ ರಕ್ಷಣೆ ನೀಡಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Don't give permission for Eid says Sharan Pumpwell, VHP in Mangalore. Says tense situations like Ragi gudda might re appear.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm