ಬ್ರೇಕಿಂಗ್ ನ್ಯೂಸ್
12-09-24 08:24 pm Mangalore Correspondent ಕರಾವಳಿ
ಮಂಗಳೂರು, ಸೆ.12: ಮುಂದಿನ ವಾರ ಈದ್ ಮಿಲಾದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು. ಈದ್ ಮಿಲಾದ್ ಮೆರವಣಿಗೆಯನ್ನು ರಸ್ತೆಯಲ್ಲಿ ಮಾಡುವಾಗ, ಒಂದ್ವೇಳೆ ಹಿಂದುಗಳು ಅವಕಾಶ ನೀಡದಿದ್ದರೆ ಜಿಹಾದಿಗಳ ಮೆರವಣಿಗೆ ನಡೆಯುವುದಕ್ಕೆ ಸಾಧ್ಯವಿಲ್ಲ. ಕಳೆದ ಬಾರಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮೆರವಣಿಗೆ ವೇಳೆ ಗಲಭೆ ನಡೆಸಿದ್ದರು. ಈ ಬಾರಿಯೂ ರಾಜ್ಯದಲ್ಲಿ ಗಲಭೆ ಮರುಕಳಿಸುವ ಸಾಧ್ಯತೆಯಿದೆ. ಹೀಗಾಗಿ ಈ ಬಾರಿ ಈದ್ ಮೆರವಣಿಗೆ ನಡೆಸುವುದಕ್ಕೆ ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಿ ಗಲಭೆ ನಡೆಸಿರುವುದನ್ನು ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಬಾರಿ ಈದ್ ಮೆರವಣಿಗೆಯ ಮೇಲೆ ನಿರ್ಬಂಧ ಹೇರಬೇಕು, ಒಂದ್ವೇಳೆ ಮೆರವಣಿಗೆಗೆ ಅವಕಾಶ ಕೊಟ್ಟು ಹಿಂದುಗಳ ಮೇಲೆ ಹಲ್ಲೆ ಘಟನೆಗಳಾದಲ್ಲಿ ಅದಕ್ಕೆ ರಾಜ್ಯ ಸರಕಾರವೇ ಕಾರಣವಾಗುತ್ತದೆ ಎಂದು ಹೇಳಿದರು.




ನಾಗಮಂಗಲ ಗಲಭೆಯ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆಯ ಕೈವಾಡ ಇದೆಯೇ ಎನ್ನುವ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅಲ್ಲಿ ನೂರಾರು ಹಿಂದುಗಳ ಮೇಲೆ ಹಲ್ಲೆಯಾಗಿದೆ, ಹತ್ತಾರು ಅಂಗಡಿಗಳಿಗೆ ಬೆಂಕಿ ಕೊಟ್ಟಿದ್ದಾರೆ. ಸಾರ್ವಜನಿಕ ಆಸ್ತಿ ಮೇಲೆ ಹಾನಿ ಮಾಡಿದ್ದಾರೆ. ನಷ್ಟ ಆದವರಿಗೆ ಪರಿಹಾರ ನೀಡಬೇಕು. ಯಾರು ಮುಗ್ಧ ಅಮಾಯಕರ ಮೇಲೆ ಕೇಸು ಹಾಕಿದ್ದೀರಿ, ಅವರ ಮೇಲಿನ ಕೇಸನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಶರಣ್, ನಮಗೆ ರಾಜ್ಯ ಸರಕಾರ, ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ನಮ್ಮ ಧಾರ್ಮಿಕ ಕಾರ್ಯಕ್ರಮಗಳಿಗೆ ರಕ್ಷಣೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡುತ್ತೇವೆ. ಪೊಲೀಸರ ಬದಲು ಕೇಂದ್ರದ ಮಿಲಿಟರಿಯ ರಕ್ಷಣೆ ನೀಡಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Don't give permission for Eid says Sharan Pumpwell, VHP in Mangalore. Says tense situations like Ragi gudda might re appear.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm