ಬ್ರೇಕಿಂಗ್ ನ್ಯೂಸ್
14-09-24 09:34 pm Mangalore Correspondent ಕರಾವಳಿ
ಮಂಗಳೂರು, ಸೆ.14: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಕಾಂಗ್ರೆಸಿನಿಂದ ಸಮರ್ಥ ಗಂಡು ಹುಡುಕುತ್ತಿದ್ದೇವೆ. ನಮ್ಮಲ್ಲಿ ಚುನಾವಣೆ ಗೆಲ್ಲುವಷ್ಟು ಮತಗಳಿಲ್ಲ. ಆದರೆ ಇಂಥ ಸ್ಥಿತಿಯಲ್ಲೂ ಗೆಲ್ಲುವುದಕ್ಕಾಗಲ್ಲ ಎಂದಿಲ್ಲ. ಅಂಥ ಎದೆಗಾರಿಕೆ ಇರುವ ಸಮರ್ಥ ವ್ಯಕ್ತಿಯನ್ನು ಚುನಾವಣಾ ಕಣಕ್ಕಿಳಿಸಲು ನೋಡುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.
ವಿಧಾನ ಪರಿಷತ್ ಉಪ ಚುನಾವಣೆಗೆ ಸಿದ್ಧತೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪಕ್ಷವನ್ನು ಪುನರ್ ಸಂಘಟಿಸುವ ಉದ್ದೇಶದಿಂದ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಪ್ರಮುಖರ ಸಭೆ ನಡೆದಿದ್ದು, ಆನಂತರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷವನ್ನು ಮತ್ತೆ ಮೇಲೆತ್ತುವುದಕ್ಕಾಗಿ ಒತ್ತು ಕೊಟ್ಟಿದ್ದೇವೆ. ಅದಕ್ಕಾಗಿ ಪ್ರತಿ ಕ್ಷೇತ್ರದಲ್ಲಿ ಕಾರ್ಯಕರ್ತರ ಅಹವಾಲು ಪಡೆಯುತ್ತಿದ್ದೇವೆ. ಬ್ಲಾಕ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರ ಬದಲಾವಣೆ ಅಗತ್ಯವಿದ್ದರೆ ಅದನ್ನು ಮಾಡುತ್ತೇವೆ. ಉಪ ಚುನಾವಣೆ ಇರುವಲ್ಲಿಗೆ ಭೇಟಿ ಕೊಟ್ಟು ಮಾಹಿತಿ ಪಡೆಯುತ್ತೇವೆ. ಮಾಹಿತಿ ಸಂಗ್ರಹಿಸಿ ಪಕ್ಷದ ಹೈಕಮಾಂಡಿಗೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಸ್ಥಳೀಯಾಡಳಿತದಿಂದ ಪರಿಷತ್ತಿಗೆ ಆಯ್ಕೆಗೊಳ್ಳುವ ಇದು ದ್ವಿಸದಸ್ಯ ಕ್ಷೇತ್ರವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುತ್ತ ಬಂದಿತ್ತು. ಈ ಬಾರಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗುತ್ತಿರುವ ಒಂದು ಸ್ಥಾನಕ್ಕೆ ಚುನಾವಣೆ ಆಗುತ್ತಿದೆ. ಸಹಜವಾಗಿ ಬಿಜೆಪಿ ಕಡೆಗಿರುವ ಮತಗಳೇ ಹೆಚ್ಚಿವೆ. ಆದರೂ ರಾಷ್ಟ್ರೀಯ ಪಕ್ಷವಾಗಿದ್ದು ನಾವು ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದರು.
ವಾಲ್ಮೀಕಿ ನಿಗಮದ ಹಗರಣ ನಿಮಗೆ ಹಿನ್ನಡೆ ಆಗಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಈ ಹಗರಣ, ತನಿಖೆ ಎಲ್ಲ ಸಾಮಾನ್ಯ ಪ್ರಕ್ರಿಯೆ. ಯಾವ ಸರಕಾರ ಇದ್ದರೂ ನಡೆದುಕೊಂಡು ಹೋಗುತ್ತದೆ. ಹಿಂದೆ ಈಶ್ವರಪ್ಪ ವಿರುದ್ಧ ಸಂತೋಷ್ ಪಾಟೀಲ್ ರಾಜ್ಯಪಾಲರಿಗೆ, ಪ್ರಧಾನಿಗೆ ಎಲ್ಲರಿಗೂ ಪತ್ರ ಬರೆದು ನ್ಯಾಯ ಸಿಕ್ಕಿಲ್ಲ ಎಂದಾಗ, ಆತ್ಮಹತ್ಯೆ ಮಾಡಿಕೊಂಡಿದ್ದ. ಎಸ್ಐಟಿ ತನಿಖೆ ನಡೆಸಿ, ಈಶ್ವರಪ್ಪಗೆ ಕ್ಲೀನ್ ಚಿಟ್ ಕೊಟ್ಟಿದೆ. ವಾಲ್ಮೀಕಿ ಪ್ರಕರಣದ ಕಾರಣಕ್ಕೆ ಹಿನ್ನಡೆ ಆಗುತ್ತೆ ಎಂದುಕೊಳ್ಳಲ್ಲ ಎಂದರು. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜಿನಾಮೆ ನೀಡುವ ಪ್ರಮೇಯ ಬರಲ್ಲ. ಹೈಕೋರ್ಟಿನಲ್ಲಿ ಅಂಥ ತೀರ್ಪು ಬರಲ್ಲ ಎಂಬ ವಿಶ್ವಾಸವಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ವಸಂತ ಕುಮಾರ್, ತನ್ವೀರ್ ಸೇಠ್, ಹರೀಶ್ ಕುಮಾರ್, ಮಂಜುನಾಥ ಭಂಡಾರಿ ಮತ್ತಿತರರಿದ್ದರು.
Kpcc state secretary Chandrashekhar in Mangalore says trying for best candidate in the empty place of Kota srinivas poojary he added
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm